AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾದ ಬಳಿಕ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಹಿಕೃಷ್ಣ, ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ. ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ ಎಂದು ಹೇಳಿದ್ದಾರೆ.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR:ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 27, 2024 | 4:57 PM

Share

ಚಾಮರಾಜನಗರ, ಸೆಪ್ಟೆಂಬರ್ 27: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯ ಸೂಚಿಸಿದ್ದ ಸೆಕ್ಷನ್ ಅಡಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಹಿ ಕೃಷ್ಣ ಪ್ರತಿಕ್ರಿಯಿಸಿದ್ದು,  ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಹಿ ಕೃಷ್ಣ, ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದ ಸ್ನೇಹಮಹಿ ಕೃಷ್ಣ 

ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್​ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್​ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.

ಒಂದು ಮೊಬೈಲ್ ಫೋನ್​ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್​ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು?

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲವೆಂಬ ಸಿಎಂ ಹೇಳಿದ್ದಾರೆ. ಒಂದೊಂದು ಸಮಯದಲ್ಲಿ ಸಿದ್ದರಾಮಯ್ಯ ಒಂದೊಂದು ರೀತಿ ವರ್ತಿಸಿದ್ದಾರೆ. ಬೇರೆಯವರ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದರು. ಆದರೆ ತಮ್ಮ ವಿರುದ್ದ ದೂರು ದಾಖಲಾದಾಗ ಉಲ್ಟಾ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ನೈತಿಕ ಬೆಲೆ ಹೊತ್ತು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Fri, 27 September 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!