AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾದ ಬಳಿಕ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಹಿಕೃಷ್ಣ, ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ. ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ ಎಂದು ಹೇಳಿದ್ದಾರೆ.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR:ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 27, 2024 | 4:57 PM

Share

ಚಾಮರಾಜನಗರ, ಸೆಪ್ಟೆಂಬರ್ 27: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯ ಸೂಚಿಸಿದ್ದ ಸೆಕ್ಷನ್ ಅಡಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಹಿ ಕೃಷ್ಣ ಪ್ರತಿಕ್ರಿಯಿಸಿದ್ದು,  ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಹಿ ಕೃಷ್ಣ, ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದ ಸ್ನೇಹಮಹಿ ಕೃಷ್ಣ 

ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್​ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್​ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.

ಒಂದು ಮೊಬೈಲ್ ಫೋನ್​ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್​ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು?

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲವೆಂಬ ಸಿಎಂ ಹೇಳಿದ್ದಾರೆ. ಒಂದೊಂದು ಸಮಯದಲ್ಲಿ ಸಿದ್ದರಾಮಯ್ಯ ಒಂದೊಂದು ರೀತಿ ವರ್ತಿಸಿದ್ದಾರೆ. ಬೇರೆಯವರ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದರು. ಆದರೆ ತಮ್ಮ ವಿರುದ್ದ ದೂರು ದಾಖಲಾದಾಗ ಉಲ್ಟಾ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ನೈತಿಕ ಬೆಲೆ ಹೊತ್ತು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Fri, 27 September 24

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು