AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ

ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on:Apr 03, 2021 | 10:16 AM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದಲ್ಲಿ ಪಾನಮತ್ತ ವ್ಯಕ್ತಿಯ ದುಷ್ಕೃತ್ಯಕ್ಕೆ 6 ಮಂದಿ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೋಜ ಎಂಬಾತ ಮದ್ಯ ಸೇವಿಸಿ ಬಂದು ಎರವರ ಮಂಜು ಎನ್ನುವವರ ಮನೆ ಬಾಗಿಲು ಹಾಕಿ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಮನೆಯೊಳಗೆ ನಿದ್ರಿಸುತ್ತಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ. ಒಟ್ಟು ಎಂಟು ಜನರ ಪೈಕಿ ಮೂವರು ಸಜೀವ ದಹನವಾಗಿದ್ದು, ಮೂವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇನ್ನುಳಿದ ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾಗ್ಯ (40) ಪಾಚೆ (60) ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹತ್ತಾರು ಎಕರೆ ಅರಣ್ಯ ಭಸ್ಮ; ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆ, ಕೃಷ್ಣಮೃಗಗಳ ಪರದಾಟ 

ಅಗ್ನಿ ಅವಘಡ; ಬಳ್ಳಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಕಾಟನ್ ಸುಟ್ಟು ಕರಕಲು

Published On - 10:06 am, Sat, 3 April 21

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ