AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು: ದಲಿತರಿಗೆ ಕ್ಷೌರ ಸೇವೆ ಒದಗಿಸುತ್ತಿದ್ದ ಸೋದರರ ಆಶಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸ್ಪಂದನೆ

ಗ್ರಾಮದಲ್ಲಿರುವ ಇತರ ಎರಡು ಕ್ಷೌರದ ಅಂಗಡಿಗಳಲ್ಲಿಯೂ ದಲಿತರಿಗೆ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿದೆ. ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿಲ್ಲ, ನಿರ್ಬಂಧವನ್ನೂ ವಿಧಿಸಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹೇಳಿದ್ದಾರೆ.

ನಂಜನಗೂಡು: ದಲಿತರಿಗೆ ಕ್ಷೌರ ಸೇವೆ ಒದಗಿಸುತ್ತಿದ್ದ ಸೋದರರ ಆಶಯಕ್ಕೆ ಸಮಾಜ ಕಲ್ಯಾಣ ಇಲಾಖೆ ಸ್ಪಂದನೆ
ನಂಜನಗೂಡು ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡುತ್ತಿರುವ ಸೋದರರು.
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on: Apr 20, 2021 | 6:36 AM

Share

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿ ಕಪ್ಪಸೋಗೆ ಗ್ರಾಮದ ಕೊಟ್ಟಿಗೆಯಲ್ಲಿ ದಲಿತರಿಗೆ ಕ್ಷೌರ ಮಾಡುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದ ಸಹೋದರರ ನೆರವಿಗೆ ಸಮಾಜ ಕಲ್ಯಾಣ ಇಲಾಖೆ ಬಂದಿದೆ. ಈ ಕುರಿತು ಏಪ್ರಿಲ್ 16ರಂದು ಟಿವಿ9 ಕನ್ನಡ ಡಿಜಿಟಲ್ ಜಾಲತಾಣದಲ್ಲಿ ‘ಯುವಕರಿಂದ ಮನೆಮನೆಗೆ ತೆರಳಿ ಸೇವೆ’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯ ಸಹಾಯಕ ನಿರ್ದೇಶಕ ಜನಾರ್ದನ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವೈಯಕ್ತಿಕ ಸೌಲಭ್ಯದಡಿ ಸ್ವಂತ ಅಂಗಡಿ ತೆರೆಯಲು ಹಣ ಮಂಜೂರು ಮಾಡಲು ಶಿಫಾರಸು ಮಾಡಿದ್ದಾರೆ.

ಗ್ರಾಮದಲ್ಲಿರುವ ಇತರ ಎರಡು ಕ್ಷೌರದ ಅಂಗಡಿಗಳಲ್ಲಿಯೂ ದಲಿತರಿಗೆ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿದೆ. ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿಲ್ಲ, ನಿರ್ಬಂಧವನ್ನೂ ವಿಧಿಸಿಲ್ಲ. ಯುವಕರಾದ ಕೆ.ಸಿ.ಮಹಾದೇವ ಮತ್ತು ಕೆ.ಸಿ.ಸಿದ್ದರಾಜು ಸೋದರರು ಉದ್ಯಮಶೀಲರು. ಸುಮಾರು ಹತ್ತು ವರ್ಷಗಳಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಸೇವೆ ಒದಗಿಸುತ್ತಿದ್ದಾರೆ. ಇವರ ಆಸಕ್ತಿ ಗಮನಿಸಿ ಅಂಗಡಿಗಾಗಿ ಸಾಲ ಒದಗಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

‘ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಸ್ವಂತ ಅಂಗಡಿ ತೆರೆಯಲು ಸಾಧ್ಯವಾಗಿಲ್ಲ. ಗ್ರಾಮದಲ್ಲಿ ಅಂಗಡಿ ತೆರೆಯಲು ಸಹಾಯ ಮಾಡಿ ಎಂದು ಯುವಕರು ಕೋರಿದ್ದಾರೆ. ಅಂಬೇಡ್ಕರ್ ನಿಗಮದಿಂದ ವೈಯಕ್ತಿಕ ಸೌಲಭ್ಯದಡಿ ಸ್ವಂತ ಅಂಗಡಿ ತೆರೆಯಲು ಸಾಲ ಮಂಜೂರು ಮಾಡಿಕೊಡಿ’ ಎಂದು ನಂಜಗೂಡು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಿಫಾರಸು ಮಾಡಿರುವ ಪತ್ರ ಟಿವಿ9 ಕನ್ನಡ ಡಿಜಿಟಲ್​ಗೆ ಲಭ್ಯವಾಗಿದೆ.

‘ನಮಗೆ 30 ಗುಂಟೆ ಒಣಭೂಮಿಯಿದೆ. ಅದರಲ್ಲಿ ಅಲ್ಪಸ್ವಲ್ಪ ಕೃಷಿ ಮಾಡುವ ಹಂಬಲ ಹೊಂದಿದ್ದೇವೆ. ಇತರರ ಕೃಷಿ ಭೂಮಿಯಲ್ಲೂ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತೇವೆ. ಕೆಲಸ ಇಲ್ಲದ ದಿನಗಳಲ್ಲಿ ಎಲೆಕ್ಟ್ರಿಶಿಯನ್ ಆಗಿಯೂ ಕೆಲಸ ಮಾಡುತ್ತೇವೆ. ಕೊರೊನಾ ಪಿಡುಗು ವ್ಯಾಪಕವಾಗಿ ಆವರಿಸಿದ ದಿನಗಳಲ್ಲೂ ದಲಿತ ಸಮುದಾಯದ ಜನರಿಗೆ ಕ್ಷೌರ ಸೇವೆ ಒದಗಿಸಿದ್ದೇವೆ. ಕ್ಷೌರಕ್ಕೆ ₹40 ಮತ್ತು ಶೇವಿಂಗ್​ಗೆ ₹20ನ್ನು ಪಡೆಯುತ್ತೇವೆ. ಅಗತ್ಯ ಇರುವವರಿಗೆ ಮನೆಮನೆಗೆ ತೆರಳಿ ಸೇವೆಯನ್ನೂ ನೀಡುತ್ತೇವೆ’ ಎಂಬ ಕೆ.ಸಿ.ಮಹದೇವ್ ಅವರ ಮಾತನ್ನು ಟಿವಿ9 ಜಾಲತಾಣ ಏಪ್ರಿಲ್ 16ರ ವರದಿಯಲ್ಲಿ ಉಲ್ಲೇಖಿಸಿತ್ತು.

(Social Welfare Department Recommends for Personal Loan to Dalit Brothers in Nanjangud)

ಇದನ್ನೂ ಓದಿ: ಮೈಸೂರಿನಲ್ಲಿ ಇಬ್ಬರು ಯುವಕರಿಂದ ಮನೆಮನೆಗೆ ತೆರಳಿ ಸೇವೆ

ಇದನ್ನೂ ಓದಿ: ಗದಗದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಅರಿವು ಮೂಡಿಸಲು ದಲಿತರು ಕುಡಿದ ಚಹಾ ಗ್ಲಾಸ್ ತೊಳೆದ ತಹಶೀಲ್ದಾರ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?