ನೇಣು ಬಿಗಿದ ಸ್ಥಿತಿಯಲ್ಲಿ.. ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕನ ಶವ ಪತ್ತೆ, ಯಾವೂರಲ್ಲಿ?
ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕನ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಧೀಕ್ಷಕರೊಬ್ಬರ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ M.B.ಶಿವಕುಮಾರ್(46) ಶವ ಪತ್ತೆಯಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಕಚೇರಿ ಅಧೀಕ್ಷಕನ ಶವ ಪತ್ತೆ
ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕನ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಧೀಕ್ಷಕರೊಬ್ಬರ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ M.B.ಶಿವಕುಮಾರ್(46) ಶವ ಪತ್ತೆಯಾಗಿದೆ.
ನಗರದ ಹರಿಹರ ಮುಖ್ಯ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಘಟನೆ ಸಂಭವಿಸಿದೆ. ಶಿವಕುಮಾರ್ ಸಾವಿಗೆ ಸದ್ಯ ಕಾರಣ ತಿಳಿದು ಬಂದಿಲ್ಲ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗಾಂಧಿನಗರ ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಶಾಲಾ ಬಾಲಕಿ, ಸ್ಥಳೀಯರಿಂದ ರಕ್ಷಣೆ..
Follow Us