AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂತಹ ಪರಿಸ್ಥಿತಿಯಲ್ಲೂ ನಾನು‌ ಧರ್ಮ ಬಿಟ್ಟು ಹೋಗಲ್ಲ: ತಮ್ಮ ಪಿಎ ರಾಜಣ್ಣ ಬಂಧನದ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ

ನಾನು ಪ್ರಮಾಣ ವಚನ ಸ್ವೀಕಾರ ವೇಳೆಯೂ ಧರ್ಮ ಪಾಲಿಸಿದ್ದೇನೆ. ಎಂಥಾ ಪರಿಸ್ಥಿತಿಯಲ್ಲೂ ನಾನು‌ ಧರ್ಮ ಬಿಟ್ಟು ಹೋಗಲ್ಲ. ಕಾನೂನು ಚೌಕಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ರಾಜಣ್ಣ ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ, ಹೀಗಾಗಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಎಂತಹ ಪರಿಸ್ಥಿತಿಯಲ್ಲೂ ನಾನು‌ ಧರ್ಮ ಬಿಟ್ಟು ಹೋಗಲ್ಲ: ತಮ್ಮ ಪಿಎ ರಾಜಣ್ಣ ಬಂಧನದ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ
ಮಾಜಿ ಸಚಿವ ಬಿ.ಶ್ರೀರಾಮುಲು
TV9 Web
| Edited By: |

Updated on: Jul 05, 2021 | 7:22 PM

Share

ಚಿತ್ರದುರ್ಗ: ಯಾವುದೇ ಸಂದರ್ಭದಲ್ಲಿ ಯಾರೂ ಧರ್ಮ ಬಿಡಬಾರದು. ಧರ್ಮ ಬಿಟ್ರೆ ಅಪಾಯ, ಗಂಡಾಂತರ ಎಂದು ತಿಳಿಯಬೇಕು. ಸತ್ಯದ ಮಾರ್ಗದಲ್ಲಿ ನಡೆಯುವವರಿಗೆ ಒಳ್ಳೆಯದೇ ಆಗುತ್ತದೆ. ರಾಜಣ್ಣ ಬಂಧನ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಪ್ರಕರಣದ ಬಗ್ಗೆ ಸಿಎಂ ಯಡಿಯೂರಪ್ಪ, ಅವರ ಪುತ್ರ ಬಿ.ವೈ. ವಿಜಯೇಂದ್ರ ಬಳಿ ಮಾತಾಡಿದ್ದೇನೆ. ಅಧಿಕಾರಿಗಳು ವಿಚಾರಣೆ ಮಾಡಿ ರಿಲೀಸ್ ಸಹ ಮಾಡಿದ್ದಾರೆ. ಸತ್ಯ ಏನೆಂದು ಇದರಿಂದ ಗೊತ್ತಾಗುತ್ತದೆ ಎಂದು ರಾಮಗಿರಿ ಗ್ರಾಮದಲ್ಲಿ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ನಾನು ಪ್ರಮಾಣ ವಚನ ಸ್ವೀಕಾರ ವೇಳೆಯೂ ಧರ್ಮ ಪಾಲಿಸಿದ್ದೇನೆ. ಎಂಥಾ ಪರಿಸ್ಥಿತಿಯಲ್ಲೂ ನಾನು‌ ಧರ್ಮ ಬಿಟ್ಟು ಹೋಗಲ್ಲ. ಕಾನೂನು ಚೌಕಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ರಾಜಣ್ಣ ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ, ಹೀಗಾಗಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಆಪ್ತನ ಬಂಧನ ಹಿನ್ನೆಲೆ ಬೇಸರದಲ್ಲಿರುವ ಸಚಿವ ರಾಮುಲು ರಾಜಣ್ಣ ನನ್ನ ಪಿಎ ಅಲ್ಲ, ನನ್ನ ಹತ್ತಿರ ಕೆಲಸ ಮಾಡ್ತಿದ್ದ. ರಾಜಣ್ಣ ನನಗೆ ಗೊತ್ತಿರುವ ಹುಡುಗ ಅಷ್ಟೇ ಎಂದು ಈಮುನ್ನವೂ ಹೇಳಿದ್ದರು. ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು. ಈ ಸಂಬಂಧ ವಿಜಯೇಂದ್ರ ನನ್ನ ಗಮನಕ್ಕೆ ತಂದಿಲ್ಲ. ಹೀಗಾಗಿ ನಾನು ವಿಜಯೇಂದ್ರ ಜತೆ ಚರ್ಚಿಸುತ್ತೇನೆ. ಪ್ರಕರಣ ಸಂಬಂಧ ಎಲ್ಲೋ ಮಿಸ್ ಕಮ್ಯೂನಿಕೇಷನ್ ಆಗಿದೆ. ಸಿಎಂ ಮತ್ತು ವಿಜಯೇಂದ್ರ ಜೊತೆ ನಾನು ಚರ್ಚಿಸುತ್ತೇನೆ. ರಾಜು ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಂಶ ಬಯಲಾಗುತ್ತದೆ. ಕಾನೂನು ರೀತಿಯಲ್ಲಿ ಕ್ರಮ ಆಗಲಿ ಎಂದು ವಿಧಾನಸೌಧದಲ್ಲಿ ಸಚಿವ ಬಿ.ಶ್ರೀರಾಮುಲು ಈ ಮುನ್ನವೂ ಹೇಳಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹೆಸರು ದುರ್ಬಳಕೆ ಮಾಡಿಕೊಂಡು ಸರ್ಕಾರದ ಮಟ್ಟದಲ್ಲಿ ಆಯಕಟ್ಟಿನ ಜಾಗಗಳನ್ನು ಕೊಡಿಸುವುದಾಗಿ ಆಮಿಷವೊಡ್ಡಿ ಜನರನ್ನು ಸುಲಿಗೆ ಮಾಡುತ್ತಿದ್ದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕ, ಬಳ್ಳಾರಿ ನಿವಾಸಿ ರಾಜಣ್ಣನನ್ನು ಸಿಸಿಬಿ ಪೊಲೀಸರು ಬಂಧಿಸಿಲ್ಲವಾದರೂ, ವಿಚಾರಣೆಯನ್ನಷ್ಟೇ ನಡೆಸುತ್ತಿದ್ದರು.

ವಿಜಯೇಂದ್ರ ನೀಡಿದ ದೂರಿನಲ್ಲಿ ಉಲ್ಲೇಖಿಸಿರುವ ಮೂವರಲ್ಲದೆ ಇನ್ನೂ ಹಲವರಿಗೆ ರಾಜಣ್ಣ ಹಣ ಕೇಳಿದ್ದಾರೆ. ಕೇವಲ ವಿಜಯೇಂದ್ರ ಅಲ್ಲದೆ ಇನ್ನೂ ಹಲವು ರಾಜಕಾರಣಿಗಳ ಹೆಸರನ್ನು ಉಲ್ಲೇಖ ಮಾಡಿರುವುದರ ಬಗ್ಗೆ ಸಿಸಿಬಿಗೆ ಸಾಕ್ಷ್ಯ ಲಭ್ಯವಾಗಿತ್ತು.

ಇದನ್ನೂ ಓದಿ:  

ಸುಮಲತಾ ಅಂಬರೀಶ್ ನನ್ನ ಸ್ನೇಹಿತನ ಅಗಲುವಿಕೆಯನ್ನು ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ: ಮಾಜಿ ಸಿಎಂ ಎಚ್​ ಡಿ ಕುಮಾರಸ್ವಾಮಿ

ಬಿ ಎಸ್ ಯಡಿಯೂರಪ್ಪ ಭೇಟಿಯಾದ ಸಂಸದೆ ಸುಮಲತಾ; ಮೈಶುಗರ್ ಕಾರ್ಖಾನೆ, ಅಕ್ರಮ ಗಣಿಗಾರಿಕೆ ವಿಚಾರ ಚರ್ಚೆ

(Social Welfare minister B Sriramulu reacts on his PA Rajannas arrest and release)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ