AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು, ಏನದು ಪ್ರಕರಣ?

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ಕೆ ದೂರು ದಾಖಲಾಗಿದೆ. ಚುನಾವಣಾ ಅಫಿಡೇವಿಟ್​​ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರರೊಬ್ಬರು ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು, ಏನದು ಪ್ರಕರಣ?
ಹೆಚ್​ಡಿ ಕುಮಾರಸ್ವಾಮಿ
Shivaprasad B
| Edited By: |

Updated on: Dec 04, 2023 | 2:19 PM

Share

ಬೆಂಗಳೂರು, (ಡಿಸೆಂಬರ್ 04): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಲೋಕಾಯುಕ್ತಕ್ಕೆ (lokayukta) ದೂರು ನೀಡಲಾಗಿದೆ. ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪ ಮೇಲೆ ಸಾಮಾಜಿಕ ಹೋರಾಟಗಾರ ಸಿ.ಎಸ್​​.ಸಿದ್ದರಾಜು ಎನ್ನುವರು ದೂರು ನೀಡಿದ್ದಾರೆ. 2004 ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇತನಗಾನಹಳ್ಳಿಯಲ್ಲಿ 24 ಎಕರೆ ಜಮೀನಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ವಿವಿಧ ಸರ್ವೇ ನಂಬರ್ ಗಳಲ್ಲಿ 1,2,3,4 ಎಕರೆ ಜಮೀನು ಖರೀದಿ ಮಾಡಿರುವುದಾಗಿ ಹೇಳಿದ್ದಾರೆ . ಹಾಗೆ ತನ್ನ ಚಿಕ್ಕಮ್ಮ ಸಾವಿತ್ರಮ್ಮರಿಂದ ದಾನ ಪಡೆದಿರುವುದಾಗಿಯೂ ಹೇಳಿದ್ದಾರೆ. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ ? ಅಥವಾ ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು? ಎಂದು ಪ್ರಶ್ನಿಸಿದ್ದಾರೆ.

2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಇನ್ನು ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ಪೂರ್ಣ ಪ್ರಮಾಣದ ಮಾಹಿತಿಯನ್ನ ನೀಡದೇ ವಂಚಿಸಿದ್ದಾರೆ ಎಂದು ಸಿ.ಎಸ್ ಸಿದ್ಧರಾಜು ಅವರು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್