AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
KUSHAL V
| Edited By: |

Updated on: Nov 21, 2020 | 4:27 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?