AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
KUSHAL V
| Edited By: |

Updated on: Nov 21, 2020 | 4:27 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್