AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
KUSHAL V
| Updated By: ಸಾಧು ಶ್ರೀನಾಥ್​|

Updated on: Nov 21, 2020 | 4:27 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್