AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಲ್ಲಾಪುರ, ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು: ವಾಟಾಳ್ ನಾಗರಾಜ್

ಮೊದಲು ಸೊಲ್ಲಾಪುರ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಎಂದು ವಾಟಾಳ್​ ನಾಗರಾಜ್ ಗುಡುಗಿದ್ದಾರೆ.

ಸೊಲ್ಲಾಪುರ, ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು: ವಾಟಾಳ್ ನಾಗರಾಜ್
ವಾಟಾಳ್​ ನಾಗರಾಜ್​
ಪೃಥ್ವಿಶಂಕರ
| Edited By: |

Updated on:Jan 18, 2021 | 11:25 AM

Share

ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿ ಕ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಮೊದಲು ಸೊಲ್ಲಾಪುರ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಎಂದು ವಾಟಾಳ್​ ನಾಗರಾಜ್ ಗುಡುಗಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ಮರಾಠ ಏಜೆಂಟ್‌ಗಳು. ನಿನ್ನೆ ಸಮಾವೇಶದಲ್ಲಿ ಅಮಿತ್ ಶಾ ಮರಾಠ ಪೇಟ ಕಟ್ಟಿದ್ದರು. ಒಬ್ಬರಾದ್ರೂ ಈ ಬಗ್ಗೆ ಮಾತಾಡಿದ್ರಾ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದರು.

ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ. ಕನ್ನಡಿಗರ ಪರವಾಗಿ ಸಿಎಂ ಕೇವಲ ನಾಟಕವಾಡುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ. ಬಾಳಾ ಠಾಕ್ರೆ ಮತ್ತೆ ಹುಟ್ಟಿಬಂದರೂ ಪಡೆಯಲಾಗಲ್ಲ. ಈ ವಿಚಾರವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಎಂಇಎಸ್ ಕ್ಯಾತೆ ತೆಗೆದರೆ ಅವರನ್ನು ಹೊರಗೆ ಹಾಕಬೇಕು.

ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮ ಮಾಡುತ್ತಾರೆ. ಆದ್ರೆ ಮಹಾರಾಷ್ಟ್ರದವರು ಬೆಳಗಾವಿ ಬೇಕು ಅಂತಾರೆ. ಸಿಎಂ ಯಡಿಯೂರಪ್ಪ ಬಹಳ ನೀಚ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಸಿಎಂ ಸಚಿವ ಸಂಪುಟ ಸಭೆಯನ್ನು ಕರೆಯಬೇಕು. ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

Published On - 8:39 am, Mon, 18 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!