AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ

ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಿರಬೆಳಗುಲಿ ಬಳಿ ನಡೆದಿದೆ. ಅಪಘಾತದಲ್ಲಿ ಪಾದಚಾರಿ ವೃದ್ಧ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಿರೆಬೆಳಗುಲಿ ಗ್ರಾಮದ ರಾಮಸ್ವಾಮಿ(76) ಮೃತ ದುರ್ದೈವಿ.

ಪಾದಚಾರಿಗೆ ಡಿಕ್ಕಿ ಹೊಡೆದು.. ಅಡಿಕೆ ತೋಟಕ್ಕೆ ನುಗ್ಗಿದ ಕಾರು: ವೃದ್ಧ ತಂದೆಯ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಯೋಧ
ವೃದ್ಧ ತಂದೆಯ ಶವ ಕಂಡು ಬಿಕ್ಕಿ ಬಿಕ್ಕಿ ಅತ್ತ ಯೋಧ; ಅಡಿಕೆ ತೋಟಕ್ಕೆ ನುಗ್ಗಿದ ಕಾರು (ಒಳಚಿತ್ರ)
Follow us
KUSHAL V
|

Updated on:Feb 19, 2021 | 9:02 PM

ಹಾಸನ: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಿರಬೆಳಗುಲಿ ಬಳಿ ನಡೆದಿದೆ. ಅಪಘಾತದಲ್ಲಿ ಪಾದಚಾರಿ ವೃದ್ಧ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹಿರೆಬೆಳಗುಲಿ ಗ್ರಾಮದ ರಾಮಸ್ವಾಮಿ(76) ಮೃತ ದುರ್ದೈವಿ. ವೃದ್ಧನನ್ನು ಕಳೆದುಕೊಂಡ ಆತನ ಕುಟುಂಬಸ್ಥರ ಆಕ್ರಂದರ ಮುಗಿಲುಮುಟ್ಟಿತು. ಅದರಲ್ಲೂ, ತಂದೆಯನ್ನು ಕಳೆದುಕೊಂಡ ಯೋಧ ಮಗನ ದುಃಖ ಹಾಗೂ ಕಣ್ಣೀರು ನೆರೆದವರ ಮನ ಕಲಕಿತು.

ಕಾರು ಹಾಸನದ ಕಡೆಯಿಂದ ವೇಗವಾಗಿ ಬರುವಾಗ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಾಮಸ್ವಾಮಿಗೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಇದ್ದ ಅಡಿಕೆ ತೋಟಕ್ಕೆ ನುಗ್ಗಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

HSN CAR ACCIDENT 2

ಅಡಿಕೆ ತೋಟಕ್ಕೆ ನುಗ್ಗಿದ ಕಾರು

HSN CAR ACCIDENT 1

ವೃದ್ಧ ತಂದೆಯ ಶವ ಕಂಡು ಬಿಕ್ಕಿ ಬಿಕ್ಕಿ ಅತ್ತ ಯೋಧ

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು ಗಾಳಿ ಸಹಿತ ಅಕಾಲಿಕ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ್ ತಾಂಡಾದಲ್ಲಿ ನಡೆದಿದೆ. ಚಾಮನಾಳ್ ತಾಂಡದ ರೆಡ್ಡಿ ರಾಠೋಡ್ ಮೃತ ಯವಕ. ಯುವಕ ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ದುರಂತ ನಡೆದಿದೆ. ಗೋಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಸಂಭವಿಸಿದೆ.

ಶಿವಮೊಗ್ಗದಲ್ಲಿ ರೌಡಿಶೀಟರ್​​ ದೀಪು ಅಲಿಯಾಸ್ ಡಿಂಗ್ ಮೇಲೆ ಫೈರಿಂಗ್ ಇತ್ತ, ಶಿವಮೊಗ್ಗ ನಗರದ  ರೌಡಿಶೀಟರ್​​ ದೀಪು ಅಲಿಯಾಸ್ ಡಿಂಗ್ ಮೇಲೆ ಖಾಕಿ ಪಡೆಯಿಂದ ಫೈರಿಂಗ್ ನಡೆದಿದೆ. ತುಂಗಾ ನಗರ ಠಾಣೆ ಪೊಲೀಸರಿಂದ ಫೈರಿಂಗ್ ನಡೆದಿದೆ. ನಗರದ ಹೊರವಲಯದ ಅನುಪಿನಕಟ್ಟೆ ಸಮೀಪ ಫೈರಿಂಗ್ ನಡೆದಿದೆ. ದೀಪು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಖಾಕಿ ಪಡೆ ಫೈರಿಂಗ್ ನಡೆಸಿದೆ. ಆರೋಪಿ ಮೇಲೆ ತುಂಗಾ ನಗರ ಠಾಣೆಯ CPI ದೀಪಕ್​​ ಫೈರಿಂಗ್ ನಡೆಸಿದ್ದಾರೆ.

ದೀಪು ವಿರುದ್ಧ ಸೆಕ್ಷನ್ 302, 307ರಡಿ ಕೇಸ್ ದಾಖಲಾಗಿತ್ತು. ಈತ ಮೆಂಟಲ್​ ಸೀನ, ಮೋಟಿ ವೆಂಕಟೇಶ್ ಕೊಲೆ ಕೇಸ್​ನಲ್ಲಿ ಭಾಗಿಯಾಗಿದ್ದ. ಇನ್ನು, ಖಾಕಿ ಫೈರಿಂಗ್​ನಲ್ಲಿ ದೀಪು ಎಡಗಾಲಿಗೆ ಗಾಯಗಳಾಗಿದ್ದು ರೌಡಿಶೀಟರ್​ನ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: BY Vijayendra ಬಸನಗೌಡ ಪಾಟೀಲ್​ ಯತ್ನಾಳ್​ಗೆ ನನ್ನ ಮೇಲೆ ಬಹಳ ಪ್ರೀತಿ -B.Y.ವಿಜಯೇಂದ್ರ ಟಾಂಗ್​

Published On - 8:50 pm, Fri, 19 February 21

ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?