AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಪಾದಯಾತ್ರೆಗೆ ಬಿಜೆಪಿಯಲ್ಲೇ ಅಪಸ್ವರ: ಇನ್ನೊಂದೆಡೆ ಕಡ್ಡಿ ಮುರಿಂತೆ ಹೇಳಿದ ಕುಮಾರಸ್ವಾಮಿ

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿಯ ಆಗ್ರಹದಂತೆ ನಾಗೇಂದ್ರ ಸಚಿವ ಸ್ಥಾನವನ್ನು ತೊರೆದಿದ್ದಾರೆ. ಇದರೊಂದಿಗೆ ವಿಕ್ಷದ ಬೇಡಿಕೆ ಈಡೇರಿದೆ. ಆದರೂ ಬಳ್ಳಾರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಕ್ಷದಲ್ಲೇ ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಹಿರಿಯರ ಅಪಸ್ವರದ ನಡುವೆಯೂ ಪಾದಯಾತ್ರೆಗೆ ವಿಜಯೇಂದ್ರ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಮಿತ್ರ ಪಕ್ಷದ ನಾಯಕ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಪಾದಯಾತ್ರೆಗೆ ಬಿಜೆಪಿಯಲ್ಲೇ ಅಪಸ್ವರ: ಇನ್ನೊಂದೆಡೆ ಕಡ್ಡಿ ಮುರಿಂತೆ ಹೇಳಿದ ಕುಮಾರಸ್ವಾಮಿ
Vijayendra And Kumaraswamy
ರಮೇಶ್ ಬಿ. ಜವಳಗೇರಾ
|

Updated on: Aug 30, 2026 | 4:37 PM

Share

ಬೆಂಗಳೂರು, (ಆಗಸ್ಟ್​ 30): ವಾಲ್ಮೀಕಿ ಹಗರಣ ಪ್ರಕರಣದ (karnataka Valmiki Scam Case) ಆರೋಪಿಯಾಗಿರುವ ನಾಗೇಂದ್ರ  (B Nagendra) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ (BJP) ಸದನದ ಒಳಗೆ ಹೊರಗೆ ಪ್ರತಿಭಟನೆ ನಡೆಸಿದ್ದು, ಬಳ್ಳಾರಿಗೆ ಪಾದಯಾತ್ರೆ ಸಹ ಹಮ್ಮಿಕೊಂಡಿತ್ತು. ಆದ್ರೆ, ಪಾದಯಾತ್ರೆಗೂ ಮೊದಲೇ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಇದೀಗ ಪಾದಯಾತ್ರೆ ಮಾಡಬೇಕಾ ಬೇಡ್ವಾ ಎನ್ನುವ ಗೊಂದಲ ಬಿಜೆಪಿಯಲ್ಲಿ ಶುರುವಾಗಿದೆ. ಹೌದು..ನಾಗೇಂದ್ರ ರಾಜೀನಾಮೆ ನೀಡಿದ ಮೇಲೆ ಯಾಕೆ ಪಾದಯಾತ್ರೆ ಎನ್ನುವುದು ಕೆಲವ ಅಭಿಪ್ರಾಯವಾಗಿದ್ದರೆ, ಇನ್ನೂ ಕೆಲವರು ಪಾದಯಾತ್ರೆ ಮಾಡೋಣ ಎನ್ನುವ ಅಭಿಪ್ರಾಯಗಳನ್ನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಪಕ್ಷದಲ್ಲೇ ಪಾದಯಾತ್ರೆ ಬಗ್ಗೆ ಗೊಂದಲ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.

ನಾಗೇಂದ್ರ ರಾಜೀನಾಮೆಗಾಗಿ ಪಾದಯಾತ್ರೆ ಘೋಷಣೆ ಮಾಡಲಾಗಿತ್ತು. ನಾಗೇಂದ್ರ ರಾಜೀನಾಮೆ ಕೊಟ್ಟಾಗಿದೆ. ಪಾದಯಾತ್ರೆ ಉದ್ದೇಶ ಪಾದಯಾತ್ರೆ ಆರಂಭಕ್ಕೂ ಮೊದಲೇ ಈಡೇರಿದೆ. ಈಗ ಪಾದಯಾತ್ರೆಯ ಅಗತ್ಯವೇನು ಎಂದು ಕೆಲವು ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾಯಕರ ಅಪಸ್ವರದ ನಡುವೆಯೇ ಪಾದಯಾತ್ರೆ ನಡೆಸಲು ರಾಜ್ಯಾಧ್ಯಕ್ಷ ವಿಜಯೇಂದ್ರ ಸಿದ್ಧತೆ ನಡೆಸಿದ್ದಾರೆ. ನಾಗೇಂದ್ರ ಒಂದೆ ವಿಚಾರ ಅಲ್ಲ, ಪಾದಯಾತ್ರೆಗೆ ಹತ್ತು ಹಲವು ಉದ್ದೇಶವಿದೆ ಎಂದಿದ್ದಾರೆ.

ಇದನ್ನೂ ನೋಡಿ: B Nagendra Resigns: ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ

ಪಾದಯಾತ್ರೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ಸೆಪ್ಟೆಂಬರ್ 1ರಿಂದ ನಮ್ಮ ಪಾದಯಾತ್ರೆ ಆರಂಭವಾಗುತ್ತೆ. ಬರ ಮತ್ತು ಉತ್ತರಕರ್ನಾಟಕ ಅಭಿವೃದ್ಧಿ ಕುರಿತು ಪಾದಯಾತ್ರೆ ಮಾಡುತ್ತೇವೆ. ವಾಲ್ಮೀಕಿ ನಿಗಮದ ಹಣ ಸಂಪೂರ್ಣ ವಾಪಸಾಗಬೇಕು. ಸೆ.10ರಂದು ಬಳ್ಳಾರಿಯಲ್ಲಿ ಪಾದಯಾತ್ರೆ ಅಂತ್ಯವಾಗಲಿದೆ ಎಂದರು.

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆಯನ್ನ ಕೊಟ್ಟಿದ್ದಾರೆ. ಮತ್ಯಾಕೆ ಪಾದಯಾತ್ರೆ ಎಂಬ ಅನುಮಾನ ನಾಯಕರಲ್ಲಿತ್ತು. ಹೈಕಮಾಂಡ್​ನವರ ಜತೆ ಚರ್ಚಿಸಿ ಕ್ಲಿಯರ್ ಮಾಡಿದ್ದೇವೆ. ಕುಮಾರಸ್ವಾಮಿಯವರ ಬಳಿಯೂ ನಾನು ಚರ್ಚೆ ಮಾಡುತ್ತೇನೆ. ನಮ್ಮ ಪಾದಯಾತ್ರೆಯಲ್ಲಿ ನಾಗೇಂದ್ರ ವಿಚಾರ ಒಂದೇ ಅಲ್ಲ. ಈ ಪಾದಯಾತ್ರೆಯಲ್ಲಿ ಹತ್ತು ಹಲವು ವಿಷಯಗಳು ಇವೆ ಎಂದು ಸ್ಪಷ್ಟಪಡಿಸಿದರು.

ಅಪಸ್ವರ ಎತ್ತಿದ ಮಿತ್ರ ಪಕ್ಷದ ನಾಯಕ

ಇನ್ನು ಈ ಬಿಜೆಪಿಯ ಬಳ್ಳಾರಿ ಪಾದಯಾತ್ರೆಗೆ ಮಿತ್ರ ಪಕ್ಷದ ನಾಯಕ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಸಹ ಅಪಸ್ವರ ಎತ್ತಿದ್ದಾರೆ.  ಬಿ.ನಾಗೇಂದ್ರ ರಾಜೀನಾಮೆ ಬಳಿಕವೂ ಪಾದಯಾತ್ರೆ ಯಾಕೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಪಾದಯಾತ್ರೆ ಏಕೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಪಾದಯಾತ್ರೆ ಬಗ್ಗೆ ಬಿಜೆಪಿಯವರು ನನ್ನ ಜೊತೆ ಚರ್ಚಿಸಿಲ್ಲ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟಾಗಿದೆ. ಯಾವ ವಿಚಾರ ಇಟ್ಕೊಂಡು ಪಾದಯಾತ್ರೆ ಮಾಡ್ತಾರೋ ಗೊತ್ತಿಲ್ಲ. ಬಿಜೆಪಿಯವರ ಪಾದಯಾತ್ರೆ ಸಂದರ್ಭದಲ್ಲಿ ನಾನು ಇರಲ್ಲ. ನಾನು ವಾಪಸ್ ಬರುವುದೇ ಸೆಪ್ಟೆಂಬರ್ 12ಕ್ಕೆ . ನಮ್ಮ ಮುಖಂಡರಿಗೆ ಸಾಂಕೇತಿಕವಾಗಿ ಹೋಗಲು ಹೇಳಿದ್ದೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್