AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಕಳ್ಳತನ ಹಾಗೂ ಮಾರಾಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ

ರಾಜ್ಯದಲ್ಲಿ ಮಕ್ಕಳ ಕಳ್ಳತನ ಹಾಗೂ ಮಾರಾಟದ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಆಯೋಗವು ಸರ್ಕಾರಕ್ಕೆ ಪತ್ರ ಬರೆದಿದ್ದು, ಸೂಕ್ತ ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಕ್ಕಳ ಕಳ್ಳತನ ಹಾಗೂ ಮಾರಾಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ಸಾಂಕೇತಿಕ ಚಿತ್ರ (Image Credits: Shutterstock)
TV9 Web
| Updated By: shivaprasad.hs|

Updated on: Oct 12, 2021 | 9:59 AM

Share

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮಾರಾಟ ಮತ್ತು ಕಳ್ಳತನದ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸರ್ಕಾರಕ್ಕೆ ಪತ್ರ ಬರೆದಿದೆ. ಮಕ್ಕಳ ಕಳ್ಳತನ, ಮಾರಾಟದ ಬಗ್ಗೆ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಯೋಗ ಮನವಿ ಮಾಡಿದೆ. ಮಕ್ಕಳ ನಾಪತ್ತೆ ಪ್ರಕರಣಗಳ ಕುರಿತು ಆತಂಕಕಾರಿ ಅಂಕಿಅಂಶಗಳನ್ನೂ ಆಯೋಗ ಇದೇ ವೇಳೆ ಉಲ್ಲೇಖಿಸಿದೆ. 2017ರಿಂದ 2019ರ ಅವಧಿಯಲ್ಲಿ 11,135 ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಪೈಕಿ 10,192 ಮಕ್ಕಳು ಪತ್ತೆಯಾಗಿದ್ದಾರೆ. ಆದರೆ 943 ಮಕ್ಕಳು ಇದುವರೆಗೂ ಪತ್ತೆಯಾಗಿಲ್ಲ ಎಂದು ಆಯೋಗ ಆತಂಕಕಾರಿ ಮಾಹಿತಿ ಹೊರಹಾಕಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಮಕ್ಕಳ ಮಾರಾಟ ಜಾಲ ಪತ್ತೆಯಾಗಿತ್ತು. ಆ ಪ್ರಕರಣದಲ್ಲಿ ಐವರನ್ನು ಬಂಧಿಸಿ, 11 ಮಕ್ಕಳನ್ನು ರಕ್ಷಿಸಲಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸರ್ಕಾರಕ್ಕೆ ಮನವಿ ಮಾಡಿದೆ. ರಾಜ್ಯದಲ್ಲಿ ಮಕ್ಕಳ ಮಾರಾಟ ಹಾಗೂ ಕಳ್ಳತನ ಶುರುವಾಗಿರುವ ಬಗ್ಗೆ ಆಯೋಗ ಕಳವಳ ವ್ಯಕ್ತಪಡಿಸಿದ್ದು, ಮೈಸೂರು,ಬೆಂಗಳೂರು, ತುಮಕೂರು ಭಾಗದಲ್ಲಿ ಮಕ್ಕಳ ಮಾರಾಟ ಹೆಚ್ಚಾಗಿರುವ ಬಗ್ಗೆ ಮಾಹಿತಿ ನೀಡಿದೆ.

ಬಡವರನ್ನು ಟಾರ್ಗೆಟ್ ಮಾಡಿಕೊಂಡು ಮಕ್ಕಳ ಮಾರಾಟ ನಡೆಸಲಾಗುತ್ತಿದೆ. ಆಸ್ಪತ್ರೆಗಳಿಂದಲೇ‌ ಮಕ್ಕಳ ಕಳ್ಳತನ ಮಾಡುವ ಮಾಫಿಯಾ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ‌ ಆಸ್ಪತ್ರೆಗಳೇ ಮಕ್ಕಳ‌ ಮಾರಾಟದ‌ ಅಡ್ಡೆಯಾಗಿವೆ ಎಂದು ಆಯೋಗ ಆತಂಕಕಾರಿ ಮಾಹಿತಿ ತಿಳಿಸಿದೆ. ಈ ಕುರಿತು ಪೊಲೀಸ್ ಇಲಾಖೆಯಿಂದ ಸೂಕ್ತ ತನಿಖೆಗೆಗೆ ಆಯೋಗದ ಮನವಿ ಮಾಡಿದೆ.

ಇದನ್ನೂ ಓದಿ:

Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Bengaluru Power Cut: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಪವರ್​ ಕಟ್; ಯಾವ ಯಾವ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ ಗೊತ್ತಾ?​

ಕೃಷಿ ಕುಟುಂಬಗಳಲ್ಲಿ ಪ್ರಾಣಿ ಸಾಕಣೆಯ ಲೆಕ್ಕಾಚಾರವನ್ನು ತೆರೆದಿಡುವ ಆಸಕ್ತಿಕರ ಅಂಕಿ-ಅಂಶಗಳು ಇಲ್ಲಿವೆ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​