AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ತೀರ್ಪು ಹಿನ್ನೆಲೆ: ಹಿಜಾಬ್ ತೆರೆದಿಟ್ಟು ತರಗತಿಗೆ ಬಂದ ಕೊಡಗು ವಿದ್ಯಾರ್ಥಿನಿಯರು

ಕೊಡಗು ಜಿಲ್ಲೆಯಲ್ಲಿ ಕಾಲೇಜಿಗೆ ಬರುವಾಗ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದರೂ ಲೇಡೀಸ್ ರೂಮ್​ನಲ್ಲಿ ಅವನ್ನು ತೆಗೆದಿರಿಸಿ, ಸಮವಸ್ತ್ರದಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

ಹೈಕೋರ್ಟ್ ತೀರ್ಪು ಹಿನ್ನೆಲೆ: ಹಿಜಾಬ್ ತೆರೆದಿಟ್ಟು ತರಗತಿಗೆ ಬಂದ ಕೊಡಗು ವಿದ್ಯಾರ್ಥಿನಿಯರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 16, 2022 | 11:25 AM

Share

ಮಡಿಕೇರಿ: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಕೊಡಗಿನ ವಿದ್ಯಾರ್ಥಿನಿಯರು ಗೌರವಿಸಿದ್ದಾರೆ. ಮಡಿಕೇರಿಯ ಎಫ್​ಎಂಸಿ ಕಾಲೇಜು, ಸರ್ಕಾರಿ ಜ್ಯೂನಿಯರ್ ಕಾಲೇಜು ಸೇರಿದಂತೆ ಹಲವೆಡೆ ಸಹಜ ಸ್ಥಿತಿ ನೆಲೆಸಿದೆ. ಕಾಲೇಜಿಗೆ ಬರುವಾಗ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದರೂ ಲೇಡೀಸ್ ರೂಮ್​ನಲ್ಲಿ ಅವನ್ನು ತೆಗೆದಿರಿಸಿ, ಸಮವಸ್ತ್ರದಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಎಲ್ಲ ವಿದ್ಯಾರ್ಥಿನಿಯರು ಮತ್ತೆ ಕಾಲೇಜುಗಳಿಗೆ ಹಿಂದಿರುಗಿರುವುದು ಆಶಾದಾಯಕ ಬೆಳವಣಿಗೆ ಎನಿಸಿದೆ.

ಹಿಜಾಬ್​ಗಾಗಿ ಪರೀಕ್ಷೆಗೆ ಬಹಿಷ್ಕಾರ ವಿಜಯಪುರ: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ ಕೆಲ ವಿದ್ಯಾರ್ಥಿನಿಯರು ಪ್ರಾಯೋಗಿಕ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಬಹಿಷ್ಕರಿಸಿದ್ದಾರೆ. ಹಿಜಾಬ್ ಕಡ್ಡಾಯವಲ್ಲಾ ಎಂದು ನಿನ್ನೆಯಷ್ಟೆ ಹೈಕೋರ್ಟ್ ಅಂತಿಮ ತೀರ್ಪು ನೀಡಿತ್ತು. ವಿಜಯಪುರ ನಗರದ ಸರ್ಕಾರಿ ಬಾಲಕಿಯರ ಪಿಯು ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿನಿಯರು ತರಗತಿಗಳಿಂದ ದೂರ ಉಳಿದರು.

ಕಾಲೇಜಿನಿಂದ ಆಗಮಿಸಿ ಮನೆಯೊಂದರಲ್ಲಿ ಸೇರಿದ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಜೀವನದ ಅವಿಭಾಜ್ಯ ಅಂಗ. ಪ್ರಾಥಮಿಕ ಹಂತದಿಂದಲೂ ಹಿಜಾಬ್ ಧರಿಸುತ್ತಿದ್ದೆವು. ಇದೀಗ ಹಿಜಾಬ್ ಕುರಿತು ವಿವಾದ ಎಬ್ಬಿಸಲಾಗಿದೆ. ಹೈಕೋರ್ಟ್ ತೀರ್ಪನ್ನು ನಾವು ಒಪ್ಪುವುದಿಲಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬರೋವರೆಗೂ‌ ತರಗತಿ ‌ಹಾಗೂ ಪರೀಕ್ಷೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದರು.

ಯಾದಗಿರಿ: ಪರೀಕ್ಷೆಗೆ 20 ವಿದ್ಯಾರ್ಥಿನಿಯರು ಗೈರು

ಯಾದಗಿರಿ: ಸಮವಸ್ತ್ರದ ಜತೆ ಹಿಜಾಬ್‌ ಬಳಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಸುರಪುರ ತಾಲ್ಲೂಕು ಕೆಂಭಾವಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಗೈರುಹಾಜರಾದರು. ಕೇವಲ ಐವರು ವಿದ್ಯಾರ್ಥಿನಿಯರು ಮಾತ್ರ ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾದರು. ನಿನ್ನೆ‌ ಕೂಡ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಹಿಂದಿರುಗಿದ್ದರು.

ಶಿವಮೊಗ್ಗ: ತರಗತಿ ಬಹಿಷ್ಕರಿಸಿದ 10 ವಿದ್ಯಾರ್ಥಿನಿಯರು

ಹಿಜಾಬ್‌ಗೆ ಅವಕಾಶ ನೀಡದ ಕಾರಣ ಕಮಲಾ ನೆಹರು ಕಾಲೇಜಿನ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಗಳಿಗೆ ಬಹಿಷ್ಕಾರ ಹಾಕಿದರು.

ಇದನ್ನೂ ಓದಿ: ಭಟ್ಕಳ: ಹಿಜಾಬ್ ತೀರ್ಪು ಹಿನ್ನೆಲೆ ಬಲವಂತವಾಗಿ ಅಂಗಡಿ ಬಂದ್; ಪಿಎಫ್​ಐ ಕಾರ್ಯಕರ್ತರು, ವಕೀಲನ ವಿರುದ್ಧ ಪ್ರಕರಣ ದಾಖಲು

ಇದನ್ನೂ ಓದಿ: ಹಿಜಾಬ್: ಹೈಕೋರ್ಟ್ ತೀರ್ಪು ಹೊರಬಿದ್ದ ನಂತರ ಯಾದಗಿರಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುವುದು ಬಿಟ್ಟು ಮನೆಗೆ ಹೋದರು!

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು