AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯೇ ಎಸ್ಎಸ್ಎಲ್​ಸಿ ಪರೀಕ್ಷೆ; ಇನ್ನೂ ವಿದ್ಯಾರ್ಥಿಗಳ ಕೈ ಸೇರಿಲ್ಲ ಪ್ರವೇಶ ಪತ್ರ

ಎಸ್ಎಸ್ಎಲ್​ಸಿ ಪರೀಕ್ಷಾ ದಿನಾಂಕ ಪ್ರಕಟದ ಬಳಿಕ ಇಲಾಖೆಗೆ 22 ಸಾವಿರ ದೂರುಗಳು ಬಂದಿದ್ದವು. ಸಚಿವ ಸುರೇಶ್ ಕುಮಾರ್ ಸೂಚನೆ ಬಳಿಕ ಡಿಡಿಪಿಐ (DDPI) ಹಾಗೂ ಬಿಇಒ (BEO) ಮೂಲಕ ಹಾಲ್ ಟಿಕೆಟ್ ವಿತರಣೆ ಮಾಡಲಾಗಿತ್ತು.

ನಾಳೆಯೇ ಎಸ್ಎಸ್ಎಲ್​ಸಿ ಪರೀಕ್ಷೆ; ಇನ್ನೂ ವಿದ್ಯಾರ್ಥಿಗಳ ಕೈ ಸೇರಿಲ್ಲ ಪ್ರವೇಶ ಪತ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 18, 2021 | 4:17 PM

Share

ಬೆಂಗಳೂರು: ನಾಳೆಯಿಂದ (ಜುಲೈ 19) ರಾಜ್ಯದಾದ್ಯಂತ ಎಸ್ಎಸ್ಎಲ್​ಸಿ (SSLC) ಪರೀಕ್ಷೆ ಆರಂಭವಾಗುತ್ತಿದೆ. ಆದರೆ ಕೆಲ ವಿದ್ಯಾರ್ಥಿಗಳ ಕೈಗೆ ಇನ್ನೂ ಪ್ರವೇಶ ಪತ್ರ ಸೇರಿಲ್ಲ. ಖಾಸಗಿ ಶಾಲೆಗಳ ಫೀಸ್ ಫೈಟ್​ನಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಟೆನ್ಷನ್ ಶುರುವಾಗಿದೆ. ಖಾಸಗಿ ಶಾಲೆಗಳ ಅಮಾನವೀಯತೆಯಿಂದ ಸುಮಾರು 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇನ್ನು ಪ್ರವೇಶ ಪತ್ರ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ಎಸ್ಎಸ್ಎಲ್​ಸಿ ಪರೀಕ್ಷಾ ದಿನಾಂಕ ಪ್ರಕಟದ ಬಳಿಕ ಇಲಾಖೆಗೆ 22 ಸಾವಿರ ದೂರುಗಳು ಬಂದಿದ್ದವು. ಸಚಿವ ಸುರೇಶ್ ಕುಮಾರ್ ಸೂಚನೆ ಬಳಿಕ ಡಿಡಿಪಿಐ (DDPI) ಹಾಗೂ ಬಿಇಒ (BEO) ಮೂಲಕ ಹಾಲ್ ಟಿಕೆಟ್ ವಿತರಣೆ ಮಾಡಲಾಗಿತ್ತು. 16 ಸಾವಿರ ವಿದ್ಯಾರ್ಥಿಗಳಿಗೆ ಇಲಾಖೆ ಪ್ರವೇಶ ಪತ್ರ ನೀಡಿದೆ. ಇನ್ನು 6 ಸಾವಿರ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಸಿಗದೆ ಗೊಂದಲದಲ್ಲಿದ್ದಾರೆ.

ಖಾಸಗಿ ಶಾಲೆಗಳಿಂದ ಮಕ್ಕಳಿಗೆ ಫೀಸ್ ಟಾರ್ಚರ್ ಮುಂದುವರಿದಿದೆ. ಶಾಲೆಗಳು ಶುಲ್ಕ ಕಟ್ಟದ ವಿದ್ಯಾರ್ಥಿಗಳ ದಾಖಲಾತಿಯನ್ನೇ ಮಾಡಿಕೊಂಡಿಲ್ಲ. ವಿದ್ಯಾರ್ಥಿ ಗ್ರೀಷ್ಮ ನಾಯಕ್ ರೀತಿ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಕ್ಸಾಂಗೆ ಅವಕಾಶವೇ ಸಿಗುತಿಲ್ಲ.

ಈ ಬಗ್ಗೆ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕಿ ಬಳಿ ಕೇಳಿದಾಗ ಉಡಾಫೆ ಉತ್ತರ ನೀಡಿದ್ದಾರೆ. ನಾನು ಎಷ್ಟು ಮಾಹಿತಿ ಕೊಡಬೇಕೋ ಅಷ್ಟು ಮಾತ್ರ ಕೊಡುತ್ತೀನಿ. ನೀವು ವಿವಾದಾತ್ಮಕ ಪ್ರಶ್ನೆಗಳ ಬಗ್ಗೆ ಏನೂ ಕೇಳೋ ಹಾಗಿಲ್ಲ. ನೀವು ಏನೂ ಕೇಳೋ ಹಾಗಿಲ್ಲ, ನಾನೂ ಏನೋ ಹೇಳೋದಿಲ್ಲ ಅಂತ ನಿರ್ದೇಶಕಿ ವಿ.ಸುಮಂಗಲಾ ಮಾಹಿತಿ ನೀಡಲು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ

SSLC Exam 2021: ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ

Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ

(Some Karnataka students who are yet to take the SSLC exam have not got Hall Ticket)

Published On - 11:58 am, Sun, 18 July 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್