AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮುಗಿಸಲು ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಸಿಎಂ ಸಿದ್ದರಾಮಯ್ಯ 4 ತಿಂಗಳ ನಂತರ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಕೆದಕಿದ್ದಾರೆ. ಅದೇ ರೀತಿಯಾಗಿ ನನ್ನ ಮುಗಿಸಲು ಸಹ ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ, ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡುತ್ತಿದ್ದಾರೆ, ಮಾಡಲಿ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ನನ್ನ ಮುಗಿಸಲು ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆರೋಪ
ನನ್ನ ಮುಗಿಸಲು ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆರೋಪ
Sunil MH
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 14, 2024 | 6:05 PM

Share

ಬೆಂಗಳೂರು, ಜೂನ್​ 14: ನನ್ನ ಮುಗಿಸಲು ಸಹ ಕೆಲ ನಾಯಕ ಪ್ರಯತ್ನ ಮಾಡುತ್ತಿದ್ದಾರೆ, ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಕೇಂದ್ರ ಸಚಿವರಾಗಿ ವಾರದ ಬಳಿಕ ಇಂದು ಬೆಂಗಳೂರಿಗೆ ಹೆಚ್​ಡಿ ಕುಮಾರಸ್ವಾಮಿ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್​ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದು ಹೇಳಿದ್ದಾರೆ.

ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​ ವಿಚಾರವಾಗಿ ಮಾತನಾಡಿದ್ದು, ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು. ಸರ್ಕಾರದಲ್ಲಿ ಕಾನೂನು ಅನುಭವ ಇರುವವರು ಸಾಕಷ್ಟು ಜನರಿದ್ದಾರೆ. ಸಿಎಂ ಸಿದ್ದರಾಮಯ್ಯ ನಾಲ್ಕು ತಿಂಗಳ ನಂತರ ಈ ಕೇಸ್ ಕೆದಕಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿ; ರಾಜ್ಯದ ಜನರಿಗೆ ಕೊಟ್ಟ ಭರವಸೆ ಏನು?

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಗೆ ಶಾಮಿಯಾನ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇತಿಹಾಸದಲ್ಲಿ ಈ ರೀತಿ ಘಟನೆ ಯಾವತ್ತೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.

4 ದಿನ ದೆಹಲಿಯಲ್ಲಿ, ಇನ್ನೆರಡು ದಿನ ಕರ್ನಾಟಕದಲ್ಲಿ ಕೆಲಸ

ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ. 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಇರುತ್ತೇನೆ. ನಮ್ಮ ಸ್ವಯಂಕೃತ ಅಪರಾಧದಿಂದ 2 ಕ್ಷೇತ್ರಗಳಲ್ಲಿ ಸೋತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವರಾದ ಬಳಿಕ ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಆ್ಯಪಲ್, ಮೂಸಂಬಿ ಹಾರ ಹಾಕಿ ಭರ್ಜರಿ ಸ್ವಾಗತ

ಹಾಸನ ಜಿಲ್ಲೆಯ ಜನತೆಗೆ ನಾನು ಎಂದಿಗೂ ದ್ರೋಹ ಮಾಡಲ್ಲ. ನನ್ನ ಕೊನೆಯುಸಿರು ಇರುವವರೆಗೂ ಹಾಸನ ಜನತೆ ಮರೆಯಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಕೇಂದ್ರ ಸಚಿವರಾಗಿ ವಾರದ ಬಳಿಕ ಇಂದು ಬೆಂಗಳೂರಿಗೆ ಹೆಚ್​ಡಿ ಕುಮಾರಸ್ವಾಮಿ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದಲ್ಲಿ ಬೇರೆ ಬೇರೆ ಇದ್ದೇವೆ ಎಂದು ಟೀಕೆಮಾಡಿದ್ದರು. ನನಗೆ ನೋವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:04 pm, Fri, 14 June 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ