AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲೊಂದು ಅಮಾನವೀಯ ಘಟನೆ.. ಕೊರೊನಾ ಸಮಯದಲ್ಲಿ ಮನೆಯವರಿಂದ ಬೀದಿಪಾಲಾದ ಅಜ್ಜಿ

ಕೊರೊನಾ ಸಂಕಷ್ಟದ ಕಾಲದಲ್ಲಿ ಮನೆಯವರೇ ಅಜ್ಜಿಯನ್ನು ಬೀದಿಪಾಲು ಮಾಡಿದ್ದು ಅಜ್ಜಿಯ ಮನವೊಲಿಸಿ ಆಕೆಯನ್ನು ಮನೆಗೆ ವಾಪಸ್ ಕಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳವಾಡಿ ಗ್ರಾಮದಲ್ಲಿ ಕುಟುಂಬವೊಂದು ಅಜ್ಜಿಯನ್ನು ನಡು ಬೀದಿಯಲ್ಲಿ ಬಿಟ್ಟು ಹೋಗಿದ್ದಾರೆ.

ಮೈಸೂರಿನಲ್ಲೊಂದು ಅಮಾನವೀಯ ಘಟನೆ.. ಕೊರೊನಾ ಸಮಯದಲ್ಲಿ ಮನೆಯವರಿಂದ ಬೀದಿಪಾಲಾದ ಅಜ್ಜಿ
ಅಜ್ಜಿಯನ್ನು ಮನೆಗೆ ವಾಪಸ್ ಕಳಿಸಿದ ಸ್ನೇಹ ಬಳಗ ಸದಸ್ಯರು
ಆಯೇಷಾ ಬಾನು
ಆಯೇಷಾ ಬಾನು|

Updated on: May 25, 2021 | 8:17 AM

Share

ಮೈಸೂರು: ಮಹಾಮಾರಿ ಕೊರೊನಾಗೆ ಜನ ಬಲಿಯಾಗುತ್ತಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಇದರ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ.

ಕೊರೊನಾ ಸಂಕಷ್ಟದ ಕಾಲದಲ್ಲಿ ಮನೆಯವರೇ ಅಜ್ಜಿಯನ್ನು ಬೀದಿಪಾಲು ಮಾಡಿದ್ದು ಅಜ್ಜಿಯ ಮನವೊಲಿಸಿ ಆಕೆಯನ್ನು ಮನೆಗೆ ವಾಪಸ್ ಕಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳವಾಡಿ ಗ್ರಾಮದಲ್ಲಿ ಕುಟುಂಬವೊಂದು ಅಜ್ಜಿಯನ್ನು ನಡು ಬೀದಿಯಲ್ಲಿ ಬಿಟ್ಟು ಹೋಗಿದ್ದಾರೆ. ಕೊರೊನಾದಂತಹ ಸಂಕಷ್ಟವನ್ನು ಎದುರಿಸಲು ರಾಜ್ಯ ಸರ್ಕಾರವೇ ಲಾಕ್ಡೌನ್ ಹೇರಿದೆ. ಇದರ ನಡುವೆ ಕುಟುಂಬವೊಂದು ಇಂತಹ ದುಷ್ಕೃತ್ಯ ಎಸಗಿದೆ.

ಮನೆಯವರೇ ದ್ವಿಚಕ್ರವಾಹನದಲ್ಲಿ ಬಂದು ಅಜ್ಜಿಯನ್ನು ನಡು ಬೀದಿಯಲ್ಲಿ ಬಿಟ್ಟುಹೋಗಿದ್ದಾರೆ. ಹುಣಸೂರಿನ ಅಗ್ರಹಾರದ ನಿವಾಸಿಯಾಗಿರುವ ಅಜ್ಜಿ, ತನಗೆ ಮಕ್ಕಳು ಕಿರುಕುಳ ಕೊಡುತ್ತಾರೆ. ನಾನು ಮನೆಗೆ ವಾಪಸ್ ಹೋಗಲ್ಲವೆಂದು ಪಟ್ಟುಹಿಡಿದಿದ್ದು ಪೊಲೀಸರ ಸಹಾಯದಿಂದ ಅಜ್ಜಿ ಮನವೊಲಿಸಿ ಸ್ನೇಹಜೀವಿ ಬಳಗದ ಸದಸ್ಯರು ಅಜ್ಜಿಯನ್ನು ಅವರ ಮನೆಗೆ ತಲುಪಿಸಿದ್ದಾರೆ. ಹಾಗೂ ಅಜ್ಜಿಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಪೊಲೀಸರು ಮಕ್ಕಳಿಗೆ ಬುದ್ದಿ ಹೇಳಿದ್ದಾರೆ. ಪೊಲೀಸರು ಸ್ನೇಹ ಬಳಗ ಸದಸ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಂತ-2 ರ ರೀಚ್ – 2 ವಿಸ್ತರಿತ ಮಾರ್ಗದ ಪರಿಶೀಲನೆ ನಡೆಸಲಿರುವ ಸಿಎಂ ಯಡಿಯೂರಪ್ಪ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು