AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಅಂತ್ಯಸಂಸ್ಕಾರಕ್ಕೆ ಹೂವು ತರಲು ಹೋದ ಮಗ, ಸಂಬಂಧಿ ಸಾವು: ಕೆಎಸ್ಆರ್​ಟಿಸಿ ಬಸ್ – ಬೈಕ್​ ನಡುವೆ ಅಪಘಾತ

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಗಣೇಶ್ ನಗರದ ನಿವಾಸಿಯಾದ ರವಿಚಂದ್ರನ್ ತಂದೆ ಹನುಮಂತಪ್ಪ ನಿನ್ನೆ ನಸುಕಿನ ಜಾವ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಹೂವು ತರುವುದಕ್ಕೆ ಶಿರಸಿಗೆ ಬಂದಿದ್ದಾಗ ಘಟನೆ ನಡೆದಿದ್ದು, ಆ ಮೂಲಕ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ.

ತಂದೆ ಅಂತ್ಯಸಂಸ್ಕಾರಕ್ಕೆ ಹೂವು ತರಲು ಹೋದ ಮಗ, ಸಂಬಂಧಿ ಸಾವು: ಕೆಎಸ್ಆರ್​ಟಿಸಿ ಬಸ್ - ಬೈಕ್​ ನಡುವೆ ಅಪಘಾತ
ಸಾಂದರ್ಭಿಕ ಚಿತ್ರ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 15, 2021 | 3:46 PM

Share

ಉತ್ತರ ಕನ್ನಡ: ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಇನ್ನೊಬ್ಬ ಸಂಬಂಧಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಎಸ್​ಬಿಐ ಸರ್ಕಲ್‌ನಲ್ಲಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದು ಬೈಕ್ ಸವಾರರಾದ ರವಿಚಂದ್ರನ್(34) ಹಾಗೂ ಸುನಿಲ್ ಇಂದೂರು(26) ಸಾವಿಗೀಡಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಗಣೇಶ್ ನಗರದ ನಿವಾಸಿಯಾದ ರವಿಚಂದ್ರನ್ ತಂದೆ ಹನುಮಂತಪ್ಪ ನಿನ್ನೆ ನಸುಕಿನ ಜಾವ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಹೂವು ತರುವುದಕ್ಕೆ ಶಿರಸಿಗೆ ಬಂದಿದ್ದಾಗ ಘಟನೆ ನಡೆದಿದ್ದು, ಆ ಮೂಲಕ ಕುಟುಂಬದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಸದ್ಯ ಈ ಸಂಬಂಧ ಶಿರಸಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಬ್ರೇಕ್ ವಿಫಲವಾಗಿ ರಸ್ತೆಬದಿ ನುಗ್ಗಿದ ತೂಫಾನ್ ವಾಹನ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ 13 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೋಗುವಾಗ ಬ್ರೇಕ್ ಫೇಲ್ ಆಗಿ ರಸ್ತೆ ಬದಿಗೆ ತೂಫಾನ್ ವಾಹನ ನುಗ್ಗಿದ್ದು, ಈ ಅವಗಢ ಸಂಭವಿಸಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

road accident

ಬ್ರೇಕ್ ವಿಫಲವಾಗಿ ರಸ್ತೆಬದಿ ನುಗ್ಗಿದ ತೂಫಾನ್ ವಾಹನ

ಚಿಕ್ಕಮಗಳೂರಿನಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೋಳೂರು ಗ್ರಾಮದಲ್ಲಿ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವಿಗೀಡಾಗಿದ್ದಾರೆ. ಮಹಾಲಿಂಗಂ(25) ಮೃತ ದುರ್ದೈವಿ. ಚಂದ್ರೇಗೌಡ ಎಂಬುವರ ಕಾಫಿ ತೋಟದಲ್ಲಿ ಏಣಿ ಮೇಲೆ ನಿಂತು ಕಾಳುಮೆಣಸು ಬಿಡಿಸುವಾಗ ಈ ಘಟನೆ ಸಂಭವಿಸಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

current death

ಮಹಾಲಿಂಗಂ(25)

ಇದನ್ನೂ ಓದಿ: Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ

ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್