AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಚಿತಾಗಾರಕ್ಕೆ ಆ್ಯಂಬುಲೆನ್ಸ್ ಸಿಗದ ಕಾರಣ ತಾಯಿ ಮೃತದೇಹವನ್ನು ಕಾರಿನಲ್ಲೇ ತಂದ ಮಗ

ಆ್ಯಂಬುಲೆನ್ಸ್​ ವ್ಯವಸ್ಥೆ ಆಗದ ಕಾರಣ ಮಗ ತನ್ನ ಕಾರಿನಲ್ಲಿಯೇ ತಾಯಿಯ ಮೃತದೇಹವನ್ನು ತಂದ ಘಟನೆ ಲಕ್ಷ್ಮೀಪುರದ ಮೇಡಿ ಅಗ್ರಹಾರ ಚಿತಾಗಾರದ ಬಳಿ ನಡೆದಿದೆ.

ಆಸ್ಪತ್ರೆಯಿಂದ ಚಿತಾಗಾರಕ್ಕೆ ಆ್ಯಂಬುಲೆನ್ಸ್ ಸಿಗದ ಕಾರಣ ತಾಯಿ ಮೃತದೇಹವನ್ನು ಕಾರಿನಲ್ಲೇ ತಂದ ಮಗ
ಪ್ರಾತಿನಿಧಿಕ ಚಿತ್ರ
shruti hegde
|

Updated on: May 09, 2021 | 4:38 PM

Share

ಬೆಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿನಿಂದ ಬಲಿಯಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಕ್ಸಿಜನ್​ ಬೆಡ್​ಗಳಿಲ್ಲದೆ ಕೆಲವು ಸೋಂಕಿತರು ಪರದಾಡುತ್ತಿದ್ದರೆ ಇನ್ನು ಕೆಲವೆಡೆ ಮೃತದೇಹವನ್ನು ಕರೆದೊಯ್ಯಲು ಆ್ಯಂಬುಲೆನ್ಸ್​ ಇಲ್ಲದೇ ಹುಡುಕಾಡುವ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಯಿಂದ ಚಿತಾಗಾರಕ್ಕೆ ತನ್ನ ತಾಯಿಯ ಮೃತದೇಹವನ್ನು ತರಲು ಆ್ಯಂಬುಲೆನ್ಸ್​ ವ್ಯವಸ್ಥೆ ಆಗದ ಕಾರಣ ಮಗ ತನ್ನ ಕಾರಿನಲ್ಲಿಯೇ ಮೃತದೇಹವನ್ನು ತಂದ ಘಟನೆ ಲಕ್ಷ್ಮೀಪುರದ ಮೇಡಿ ಅಗ್ರಹಾರ ಚಿತಾಗಾರದ ಬಳಿ ನಡೆದಿದೆ.

ತನ್ನ ತಾಯಿ ಲಕ್ಷ್ಮಿ (55) ಕೊರೊನಾ ಸೊಂಕಿನಿಂದ ಬಳಲುತ್ತಿದ್ದರು. ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಕಾರಿನಲ್ಲಿ ತಾಯಿಯನ್ನು ಕುರಿಸಿಕೊಡು ಆಸ್ಪತ್ರೆಗಾಗಿ ಪರದಾಡಿದ್ದರು. ಕೊನೆ ಕ್ಷಣದಲ್ಲಿ ದೇವನಹಳ್ಳಿಯ ರಾಮಯ್ಯ ಲೀಲಾ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಸಿಗುತ್ತದೆ. ಆದರೆ ಚಿಕಿತ್ಸೆ ಫಲಿಸದೇ ತಾಯಿ ಲಕ್ಷ್ಮಿ ಕೊನೆಯುಸಿರುಬಿಡುತ್ತಾರೆ. ಆದರೆ ಚಿತಾಗಾರಕ್ಕೆ ಮೃತದೇಹ ಕೊಂಡೊಯ್ಯಲು ಆ್ಯಂಬುಲೆನ್ಸ್​ ಸಿಗದ ಕಾರಣ ಮೃತದೇಹವನ್ನು ತನ್ನ ಕಾರಿನಲ್ಲಿಯೇ ಕೊಂಡೊಯ್ಯುತ್ತಾರೆ. ಅಜ್ಜಿಯನ್ನು ಕಳೆದುಕೊಂಡ ದುಃಖದಲ್ಲಿ ಚಿತಾಗಾರದ ಮುಂದೆ ಇಬ್ಬರು ಮೊಮ್ಮಕ್ಕಳು ಕಣ್ಣೀರು ಇಡುತ್ತಿದ್ದಾರೆ. ಇನ್ಮುಂದೆ ನೀವು ಅಜ್ಜಿ ಜೊತೆ ಜಗಳ ಆಡೋಕೆ ಆಗೋದಿಲ್ಲ ಎಂದು ಮೊಮ್ಮಕ್ಕಳ ಜೊತೆ ಲಕ್ಷ್ಮಿ ಮಗ ಕೂಡಾ ದುಃಖಿಸುತ್ತಿದ್ದಾರೆ.

ಸರ್ಕಾರಕ್ಕೆ ಇನ್ನೆಷ್ಟು ಜನರ ಬಲಿಬೇಕು? ತಮ್ಮವರನ್ನು ಕಳೆದುಕೊಂಡು ಸರ್ಕಾರಕ್ಕೆ ಶಾಪ ಹಾಕಿದ ಕುಟುಂಬಸ್ಥರು ಕೊರೊನಾ ಸೋಂಕಿಗೆ ಅನೇಕ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾಗೆ ಬಲಿಯಾದವರ ಕುಟುಂಬಗಳು ನಿತ್ಯ ಕಣ್ಣೀರಿನಲ್ಲಿ ಮುಳುಗಿದ್ದಾರೆ. ತಮ್ಮವರನ್ನು ಕಳೆದುಕೊಂಡು ಅದೆಷ್ಟೂ ಕುಟುಂಬಗಳು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದೆ. ಇಂತಹದ್ದೇ ಕರುಳು ಹಿಂಡುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವೈದ್ಯರ ಕಾಲು ಹಿಡಿದುಕೊಂಡ್ರೂ ನನ್ನ ಪತ್ನಿಯನ್ನ ಉಳಿಸಿಕೊಟ್ಟಿಲ್ಲ ಎಂದು 40 ವರ್ಷದ ಪತ್ನಿಯನ್ನ ಕಳೆದುಕೊಂಡ ಪತಿ ಕಣ್ಣೀರು ಇಟ್ಟಿದ್ದಾರೆ. ಈ ದೃಶ್ಯ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ಹಾಕಿದ್ರೂ ಜನ ಮಾತ್ರ ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಆದ್ರೆ ತಮಗೆ ಸರ್ವಸ್ವವೂ ಆಗಿದ್ದ ವ್ಯಕ್ತಿಗಳನ್ನು ಕಳೆದುಕೊಂಡ ಜನರ ಕಣ್ಣೀರು ನಿರ್ಲಕ್ಷ್ಯವಹಿಸುವವರಿಗೆ ಬುದ್ದಿ ಹೇಳುತ್ತಿದೆ.

ಇದನ್ನೂ ಓದಿ: ಸತತವಾಗಿ ಏರುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ; ಸಿಎಂ ಯಡಿಯೂರಪ್ಪನವರ ಜತೆ ಪ್ರಧಾನಿ ಮೋದಿ ಸಮಾಲೋಚನೆ

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​