AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಕೊನೆಯುಸಿರೆಳೆದ ಮಗ

ಕೀಲಾರ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಜಾತ ಚಿಕಿತ್ಸೆ ಫಲಿಸದೆ ನಿನ್ನೆ (ಮೇ 11) ಮೃತಪಟ್ಟಿದ್ದಾರೆ. ತಾಯಿಗೆ ಕೊವಿಡ್ ಬಂದ ದಿನದಿಂದ ಮಗ ರಮೇಶ್ (38) ಮಾನಸಿಕ ಆಘಾತಕೊಳಗಾಗಿದ್ದರು. ತಾಯಿಯ ಸಾವಿನ ಸುದ್ದಿ ಕೇಳಿದ ಮಗನಿಗೆ ಮನೆಯಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಮಂಡ್ಯ: ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಕೊನೆಯುಸಿರೆಳೆದ ಮಗ
ಹೃದಯಘಾತದಿಂದ ಸಾವನ್ನಪ್ಪಿದ ಮಗ ರಮೇಶ್
sandhya thejappa
|

Updated on:May 12, 2021 | 9:40 AM

Share

ಮಂಡ್ಯ: ಕೊರೊನಾ ಜನರ ಬದುಕನ್ನೆ ಕಿತ್ತುಕೊಳ್ಳುತ್ತಿದೆ. ಅದೆಷ್ಟೋ ಕುಟುಂಬಕ್ಕೆ ಆಧಾರವಾಗಿದ್ದ ಜೀವಗಳನ್ನು ಕೊರೊನಾ ಸೋಂಕು ಬಲಿ ಪಡೆಯುತ್ತಿದೆ. ತಂದೆ-ತಾಯಿ ಅಗಲಿಕೆಯನ್ನು ಸಹಿಸದ ಮಕ್ಕಳು ಕೂಡಾ ಹೃದಯಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಇಂತಹದೊಂದು ಘಟನೆ ಸದ್ಯ ಮಂಡ್ಯದ ಸುಭಾಷ್ ನಗರದಲ್ಲಿ ನಡೆದಿದೆ. ಕೊರೊನಾ ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಮಗ ಸಾವನ್ನಪ್ಪಿದ್ದಾರೆ. 60 ವರ್ಷದ ತಾಯಿ ಸುಜಾತ ಕೊವಿಡ್ ಸೋಂಕಿನಿಂದ ಬಳಲುತ್ತಿದ್ದರು. ಕೀಲಾರ ಸಮುದಾಯ ಕೇಂದ್ರಕ್ಕೆ ದಾಖಲಾಗಿದ್ದರು.

ಕೀಲಾರ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಜಾತ ಚಿಕಿತ್ಸೆ ಫಲಿಸದೆ ನಿನ್ನೆ (ಮೇ 11) ಮೃತಪಟ್ಟಿದ್ದಾರೆ. ತಾಯಿಗೆ ಕೊವಿಡ್ ಬಂದ ದಿನದಿಂದ ಮಗ ರಮೇಶ್ (38) ಮಾನಸಿಕ ಆಘಾತಕೊಳಗಾಗಿದ್ದರು. ತಾಯಿಯ ಸಾವಿನ ಸುದ್ದಿ ಕೇಳಿದ ಮಗನಿಗೆ ಮನೆಯಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ. ಒಂದೇ ದಿನ ಒಂದೇ ಕುಟುಂಬದ ಇಬ್ಬರ ಸಾವಿನಿಂದ ಕುಟುಂಬ ಕಂಗಾಲಾಗಿದೆ.

ಸಾವಿನಲ್ಲೂ ಒಂದಾದ ಸಹೋದರರು ರಾಯಚೂರು: ಕೊರೊನಾ ಸೋಂಕಿಗೆ ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮಾನ್ವಿ ತಾಲೂಕಿನ ಮುರಾನಪುರ ಗ್ರಾಮದ ಸಹೋದರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಹೇಶ್ವರಸಿಂಗ್ (46), ಸುರೇಶ್ವರಸಿಂಗ್ (43) ಮೃತ ಸಹೋದರರು. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಸಹೋದರರು ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಇರೊದ್ರಿಂದಲೇ ಸಹೋದರರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ

Health Workers: ನಿಮ್ಮ ಧ್ವನಿಗೆ ನಮ್ಮ ಧ್ವನಿಯೂ ; ಇಡೀ ಊರಿಗೆ ಬಂದದ್ದು ತನಗೆ ಬರಲಿಕ್ಕಿಲ್ಲ ಎಂಬ ಭಾವನೆ ಇನ್ನೂ ಹಲವರಲ್ಲಿದೆ

ಮೆಣಸಿನಕಾಯಿ ಖರೀದಿಸಲು 6 ಕಿಲೋಮೀಟರ್ ದೂರ ಬಂದಿದ್ದ ಮೈಸೂರು ವ್ಯಕ್ತಿಗೆ ಎಎಸ್ಐ ತರಾಟೆ

(son has died of a heart attack after learning of mother death at mandya)

Published On - 9:37 am, Wed, 12 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ