ಕೌಟುಂಬಿಕ ಕಲಹ: ದಾವಣಗೆರೆಯಲ್ಲಿ ಟ್ರಾಕ್ಟರ್ ಹತ್ತಿಸಿ ತಾಯಿ ಮತ್ತು ಸಹೋದರಿಯನ್ನೇ ಕೊಂದ ಪಾಪಿ..

ಸರೋಜಮ್ಮ (63) ಜ್ಯೋತಿ (42) ಕೊಲೆಯಾದ ತಾಯಿ ಹಾಗೂ ಸಹೋದರಿಯಾಗಿದ್ದಾರೆ. ಆರೋಪಿ ಭರಮಗೌಡ, ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ಇಬ್ಬರ ಮೇಲೆ ಟ್ರಾಕ್ಟರ್ ಹತ್ತಿಸಿ ಕಬ್ಬಿಣ ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ.

ಕೌಟುಂಬಿಕ ಕಲಹ: ದಾವಣಗೆರೆಯಲ್ಲಿ ಟ್ರಾಕ್ಟರ್ ಹತ್ತಿಸಿ ತಾಯಿ ಮತ್ತು ಸಹೋದರಿಯನ್ನೇ ಕೊಂದ ಪಾಪಿ..
ಸಾಂದರ್ಭೀಕ ಚಿತ್ರ
Edited By:

Updated on: Jan 08, 2021 | 4:14 PM

ದಾವಣಗೆರೆ:  ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೋರ್ವ ತಾಯಿ ಮತ್ತು ಸಹೋದರಿಯ ಮೇಲೆ ಟ್ರಾಕ್ಟರ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಯಕ್ಕೆಗುಂಡಿ ಗ್ರಾಮದಲ್ಲಿ ನಡೆದಿದೆ.

ಸರೋಜಮ್ಮ (63) ಜ್ಯೋತಿ (42) ಕೊಲೆಯಾದ ತಾಯಿ ಹಾಗೂ ಸಹೋದರಿ. ಆರೋಪಿ ಭರಮಗೌಡ, ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ಇಬ್ಬರ ಮೇಲೆ ಟ್ರಾಕ್ಟರ್ ಹತ್ತಿಸಿ, ಕಬ್ಬಿಣ ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಅವಘಡದಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮಲೇಬೆನ್ನೂರು ಪೊಲೀಸರ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಳಿಕ ಆರೋಪಿ ಭರಮಗೌಡ ಪರಾರಿಯಾಗಿದ್ದು, ಭರಮಗೌಡನಿಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

ಕೋಟೆ ನಾಡಿನಲ್ಲಿ ಭೀಕರ ಘಟನೆ, ಹಳೇ ವೈಷಮ್ಯಕ್ಕೆ ಮಹಿಳೆಯನ್ನು ಕೊಚ್ಚಿ, ಕೊಚ್ಚಿ ಬರ್ಬರ ಹತ್ಯೆ

Published On - 4:10 pm, Fri, 8 January 21

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us