AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕೊರೊನಾ ಸೋಂಕಿತ ತಾಯಿಯನ್ನು ನೋಡಲು ಬಿಡದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಪುತ್ರ

ಕೊರೊನಾ ಸೋಂಕಿತ ತಾಯಿ ಮುಖವನ್ನು ನೋಡಲು ಬಿಟ್ಟಿಲ್ಲ ಎಂದು ದುಖಿಃತನಾಗಿರುವ ಯುವಕ ಜಿಮ್ಸ್ ಕಟ್ಟಡದ ಮೇಲೇರಿ ಆತ್ಮಹತ್ಯೆಗೆ ಮುಂದಾಗಿದ್ದ. ಇದರಿಂದ ಕಲಬುರಗಿಯ ಜಿಮ್ಸ್​ನ ಸಿಬ್ಬಂದಿ ತಾಯಿಯನ್ನು ನೋಡಲು ಅವಕಾಶ ಮಾಡಿಕೊಡುವುದಾಗಿ ಯುವಕನಿಗೆ ಭರವಸೆ ನೀಡಿದ್ದರು.

ಕಲಬುರಗಿ: ಕೊರೊನಾ ಸೋಂಕಿತ ತಾಯಿಯನ್ನು ನೋಡಲು ಬಿಡದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಪುತ್ರ
ಪ್ರಾತಿನಿಧಿಕ ಚಿತ್ರ
sandhya thejappa
|

Updated on: Apr 25, 2021 | 12:44 PM

Share

ಕಲಬುರಗಿ: ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಎರಡನೇ ಅಲೆ ಬಾಳಿ ಬದುಕಬೇಕಾದ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಬೆಡ್, ಆ್ಯಕ್ಸಿಜನ್ ಕೊರತೆ ಅಭಾವ ಹೆಚ್ಚಾಗಿದೆ. ಸದ್ಯ ಈ ಕೊರತೆಯನ್ನು ನೀಗಿಸಲು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಮಧ್ಯೆ ಕೊರೊನಾ ಸೋಂಕಿತ ತಾಯಿಯನ್ನು ನೋಡಲು ಬಿಡದ ಹಿನ್ನೆಲೆ ಪುತ್ರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಕೊರೊನಾ ಸೋಂಕಿತ ತಾಯಿ ಮುಖವನ್ನು ನೋಡಲು ಬಿಟ್ಟಿಲ್ಲ ಎಂದು ದುಖಿಃತನಾಗಿರುವ ಯುವಕ ಜಿಮ್ಸ್ ಕಟ್ಟಡದ ಮೇಲೇರಿ ಆತ್ಮಹತ್ಯೆಗೆ ಮುಂದಾಗಿದ್ದ. ಇದರಿಂದ ಕಲಬುರಗಿಯ ಜಿಮ್ಸ್​ನ ಸಿಬ್ಬಂದಿ ತಾಯಿಯನ್ನು ನೋಡಲು ಅವಕಾಶ ಮಾಡಿಕೊಡುವುದಾಗಿ ಯುವಕನಿಗೆ ಭರವಸೆ ನೀಡಿದ್ದರು. ಜಿಮ್ಸ್​ನ ಸಿಬ್ಬಂದಿ ಭರವಸೆ ನೀಡಿದ ಹಿನ್ನೆಲೆ ಕಟ್ಟಡದ ಮೇಲಿಂದ ಯುವಕ ಕೆಳಗೆ ಇಳಿದು ಬಂದಿದ್ದಾನೆ. ಈ ಹೃದಯ ವಿದ್ರಾವಕ ಘಟನೆ ಇಂದು (ಏಪ್ರಿಲ್ 25) ಬೆಳಿಗ್ಗೆ 5 ಗಂಟೆ ಹೊತ್ತಿಗೆ ನಡೆದಿದೆ.

ನಿನ್ನೆಯೂ ಕೂಡಾ ತನ್ನ ತಾಯಿಯ ಸಾವನ್ನು ತಿಳಿಯದ ಕೊರೊನಾ ಸೋಂಕಿತ ಮಗನಿಗೆ ಕುಟುಂಬಸ್ಥರು ವಿಚಾರ ತಿಳಿಸದೆ ಅಂತ್ಯಕ್ರಿಯೆ ನೆರವೇರಿಸಿದ್ದರು. ತಾಯಿಗೆ ಕೊರೊನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜೊತೆಗೆ ಮಗನಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ತಾಯಿ ಕೊನೆಯುಸಿರೆಳೆದಳು. ಈ ಮಾಹಿತಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗನಿಗೆ ಹೇಳದೆ ಕುಟುಂಬಸ್ಥರು ಅಂತ್ಯಸಂಸ್ಕಾರವನ್ನು ನೆರವೇರಿಸಿದರು.

ತಾಯಿಯ ಸಾವನ್ನು ಅರಿಯದ ಮಗ ಅಮ್ಮ ಹೇಗಿದ್ದಾರೆ ಎಂದು ಕುಟುಂಬಸ್ಥರ ಬಳಿ ಕೇಳುತ್ತಿದ್ದ. ಅದಕ್ಕೆ ತಾಯಿಯ ಸಾವನ್ನು ಸಹಿಸದ ಮಗನಿಗೆ ಆರೋಗ್ಯದ ಸ್ಥಿತಿ ಹದಗೆಡುತ್ತದೆ ಎಂಬ ಕಾರಣಕ್ಕೆ ಸಾವಿನ ಸುದ್ದಿ ಹೇಳದೆ ಅರಾಮಾಗಿದ್ದಾರೆಂದು ಹೇಳಿದ್ದಾರೆ.

ಇದನ್ನೂ ಓದಿ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ; ಬಸವರಾಜ ಬೊಮ್ಮಾಯಿ

ಕೊರೊನಾಗೆ ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣ ಏನಾಯ್ತು? ಸಾಮಾಜಿಕ ಜಾಲತಾಣದಲ್ಲಿ ಕೇಂದ್ರಕ್ಕೆ ಜನರಿಂದ ಪ್ರಶ್ನೆಗಳ ಸುರಿಮಳೆ

(son tried to commit suicide as refused to see Corona infected mother at Kalaburagi)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್