AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗ: ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿತ

ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್​ನಲ್ಲಿ ಸಾಕಷ್ಟು ಸಾಲ‌ಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ.

ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗ: ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿತ
ಗೋಪಿಕೃಷ್ಣ
preethi shettigar
| Edited By: |

Updated on: Jan 19, 2021 | 1:35 PM

Share

ಬೆಂಗಳೂರು: ಆಸ್ತಿಗಾಗಿ ಹೆತ್ತ ತಾಯಿಯ ಕುತ್ತಿಗೆಯನ್ನು ಸೀಳಿದ್ದು, ತಾಯಿಯ ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿದ ಘಟನೆ ಬೆಂಗಳೂರಿನ ಮಡಿವಾಳದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ.

ಗೋಪಿಕೃಷ್ಣ ಎಂಬಾತ ಈ ಕೃತ್ಯ ಎಸಗಿದ್ದು, ತಂದೆ ಆಸ್ತಿಯಲ್ಲಿ ಪಾಲು ಕೇಳಿ ಪ್ರತಿನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ. ಸ್ವಲ್ಪ ದಿನ ಇರು ಆಸ್ತಿ ಪಾಲು ಮಾಡುವ ಎಂದು ತಾಯಿ ಹೇಳಿದ್ದರೂ ಅದನ್ನು ಕಿವಿಗೆ ಹಾಕಿಕೊಳ್ಳದ ಗೋಪಿ ತನ್ನ ತಾಯಿ ಗುಣಮ್ಮ, ನಾದಿನಿ ಗಿರಿಜ ಹಾಗೂ ಮನೆಯಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಕಂದಮ್ಮಗೆ ಚಾಕು ಇರಿದಿದ್ದಾನೆ.

ಗೋಪಿ ತಾಯಿ ಗುಣಮ್ಮ, ನಾದಿನಿ ಗಿರಿಜ, ತಮ್ಮನ ಮಗು

ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್​ ಸಂದರ್ಭದಲ್ಲಿ ಸಾಕಷ್ಟು ಸಾಲ ‌ಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಮಡಿವಾಳ ಮಾರ್ಕೇಟ್​ನಲ್ಲಿ 55 ರೂಪಾಯಿಗೆ ಚಾಕು ತಂದಿದ್ದ ಗೋಪಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದು, ಅದೃಷ್ಟವಶಾತ್ ಗಾಯಗೊಂಡ ಎಲ್ಲರೂ ಬದುಕುಳಿದಿದ್ದಾರೆ. ಸದ್ಯ ಈ ಸಂಬಂಧ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!