Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗ: ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿತ

ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್​ನಲ್ಲಿ ಸಾಕಷ್ಟು ಸಾಲ‌ಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ.

ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗ: ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿತ
ಗೋಪಿಕೃಷ್ಣ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Jan 19, 2021 | 1:35 PM

ಬೆಂಗಳೂರು: ಆಸ್ತಿಗಾಗಿ ಹೆತ್ತ ತಾಯಿಯ ಕುತ್ತಿಗೆಯನ್ನು ಸೀಳಿದ್ದು, ತಾಯಿಯ ಜೊತೆಗಿದ್ದ ನಾದಿನಿ ಮತ್ತು ತಮ್ಮನ ಮಗನಿಗೂ ಚಾಕು ಇರಿದ ಘಟನೆ ಬೆಂಗಳೂರಿನ ಮಡಿವಾಳದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ.

ಗೋಪಿಕೃಷ್ಣ ಎಂಬಾತ ಈ ಕೃತ್ಯ ಎಸಗಿದ್ದು, ತಂದೆ ಆಸ್ತಿಯಲ್ಲಿ ಪಾಲು ಕೇಳಿ ಪ್ರತಿನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ. ಸ್ವಲ್ಪ ದಿನ ಇರು ಆಸ್ತಿ ಪಾಲು ಮಾಡುವ ಎಂದು ತಾಯಿ ಹೇಳಿದ್ದರೂ ಅದನ್ನು ಕಿವಿಗೆ ಹಾಕಿಕೊಳ್ಳದ ಗೋಪಿ ತನ್ನ ತಾಯಿ ಗುಣಮ್ಮ, ನಾದಿನಿ ಗಿರಿಜ ಹಾಗೂ ಮನೆಯಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಕಂದಮ್ಮಗೆ ಚಾಕು ಇರಿದಿದ್ದಾನೆ.

ಗೋಪಿ ತಾಯಿ ಗುಣಮ್ಮ, ನಾದಿನಿ ಗಿರಿಜ, ತಮ್ಮನ ಮಗು

ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್​ ಸಂದರ್ಭದಲ್ಲಿ ಸಾಕಷ್ಟು ಸಾಲ ‌ಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಮಡಿವಾಳ ಮಾರ್ಕೇಟ್​ನಲ್ಲಿ 55 ರೂಪಾಯಿಗೆ ಚಾಕು ತಂದಿದ್ದ ಗೋಪಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದು, ಅದೃಷ್ಟವಶಾತ್ ಗಾಯಗೊಂಡ ಎಲ್ಲರೂ ಬದುಕುಳಿದಿದ್ದಾರೆ. ಸದ್ಯ ಈ ಸಂಬಂಧ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ