AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಗೈರು: ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ

ಬೆಳಗಾವಿಯಲ್ಲಿ ನಡೆಯುತ್ತಿರುವ ಎರಡು ದಿನ ಗಾಂಧಿ ಭಾರತ್ ಕಾರ್ಯಕ್ರಮಕ್ಕೆ ದೇಶದ ಕಾಂಗ್ರೆಸ್ ನಾಯಕರ ದಂಡೆ ನಗರಕ್ಕೆ ಆಗಮಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಇಡೀ ಮಂತ್ರಿ ಮಂಡಲ ಮತ್ತು ಕಾಂಗ್ರೆಸ್ ನಾಯಕರು ಈಗಾಗಲೇ ಬೆಳಗಾವಿಯಲ್ಲಿ ಬಿಡು ಬಿಟ್ಟಿದ್ದಾರೆ. ಆದ್ರೆ, ಮುಖ್ಯವಾಗಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗೈರು ಎದ್ದು ಕಾಣುತ್ತಿದೆ. ಇನ್ನು ಈ ಬಗ್ಗೆ ಸೋನಿಯಾ ಗಾಂಧಿ, ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ ಎಂದು ಪತ್ರ ಬರೆದಿದ್ದು, ಮಹತ್ವದ ಕರೆಯೊಂದನ್ನು ನೀಡಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಗೈರು: ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ
Sonia Gandhi
TV9 Web
| Edited By: |

Updated on:Dec 26, 2024 | 6:31 PM

Share

ಬೆಳಗಾವಿ, (ಡಿಸೆಂಬರ್ 26): ಬೆಳಗಾವಿಯಲ್ಲಿ ಕಾಂಗ್ರೆಸ್​ನದ್ದೆ ಕಲರವ ನಡೆಯತ್ತಿದೆ. 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಜೀ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮದಲ್ಲಿದೆ. ಹೀಗಾಗಿ ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಗೈರಾಗಿದ್ದು, ಈ ಸಂಬಂಧ ಪತ್ರ ಬರೆದಿರುವ ಅವರು ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ.

ಸೋನಿಯಾ ಗಾಂಧಿ ಪತ್ರದಲ್ಲೇನಿದೆ?

ಐತಿಹಾಸಿಕ ಕಾರ್ಯಕ್ರಮದಲ್ಲಿ ನಿಮ್ಮೊಂದಿಗಿರಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. 39ನೇ ಅಧಿವೇಶನ ನಡೆದ ಸ್ಥಳದಲ್ಲೇ ನೀವೆಲ್ಲಾ ಸಮಾವೇಶಗೊಂಡಿರುವುದು ಸೂಕ್ತವಾಗಿದೆ. ಗಾಂಧೀಜಿ ಇದೇ ಸ್ಥಳದಲ್ಲಿ ಅಧ್ಯಕ್ಷರಾಗಿರುವುದಕ್ಕೆ ನಮ್ಮ ಪಕ್ಷಕ್ಕೆ ಹಾಗೂ ಸ್ವಾತಂತ್ರ್ಯ ಚಳವಳಿಗೆ ಮಹತ್ವದ ತಿರುವು ನೀಡಿದೆ. ದೆಹಲಿಯಲ್ಲಿ ಅಧಿಕಾರದಲ್ಲಿ ಇರುವವರಿಂದ ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬೆದರಿಕೆ ಇದೆ. ಅಧಿಕಾರದಲ್ಲಿರುವ ಸಂಘಟನೆಗಳು ಎಂದೂ ಸ್ವಾತಂತ್ರ್ಯಕ್ಕಾಗಿ ಎಂದೂ ಹೋರಾಟ ಮಾಡಲಿಲ್ಲ.. ಅಲ್ಲದೇ ಮಹಾತ್ಮ ಗಾಂಧೀಜಿ ಅವರನ್ನ ಕಟುವಾಗಿ ವಿರೋಧಿಸಿದವರು, ಗಾಂಧೀಜಿ ಹತ್ಯೆ ಮಾಡಿದವರನ್ನ ಸಂಭ್ರಮಿಸಿದವರು.

ಇದನ್ನೂ ಓದಿ: ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ದೇಶದ ವಿವಿಧೆಡೆ ಗಾಂಧಿ ಸಂಘ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದು, ಇಂದು ನಡೆಯುತ್ತಿರುವ ಸಭೆಯನ್ನ ನವ ಸತ್ಯಾಗ್ರಹ ಬೈಠಕ್ ಎಂದು ಕರೆದಿರುವುದು ಸೂಕ್ತವಾಗಿದೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಪತ್ರದ ಮೂಲಕ ಕರೆ ಕೊಟ್ಟಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು(ಡಿಸೆಂಬರ್ 26) ಬೆಳಗಾವಿಯ ವೀರಸೌಧದಲ್ಲಿ ನಡೆದ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಸಭೆಯಲ್ಲಿ ರಾಹುಲ್, ಕೆ.ಸಿ.ವೇಣುಗೋಪಾಲ್​, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಣದೀಪ್​ ಸಿಂಗ್​ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಆದ್ರೆ, CWC ಸಭೆಗೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗೈರು ಎದ್ದು ಕಾಣುತ್ತಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Thu, 26 December 24

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ