ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲುಗಳು ಮೇ 31ರವರೆಗೆ ರದ್ದು; ಇಲ್ಲಿದೆ ವಿವರ

ರಾಜ್ಯದ ವಿವಿಧಡೆಯಿಂದ ಕೆಎಸ್​ಆರ್​ ಬೆಂಗಳೂರಿಗೆ ಬರುವ ರೈಲುಗಳನ್ನು ರದ್ದು, ಭಾಗಶಃ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮತ್ತು ಕೊಂಕಣ ರೈಲ್ವೆ ವಲಯ ತಿಳಿಸಿದೆ. ಹಾಗಿದ್ದರೆ ಯಾವೆಲ್ಲ ರೈಲುಗಳನ್ನು ರದ್ದು ಮಾಡಲಾಗಿದೆ? ಇಲ್ಲಿ ಓದಿ

ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲುಗಳು ಮೇ 31ರವರೆಗೆ ರದ್ದು; ಇಲ್ಲಿದೆ ವಿವರ
ರೈಲು
Follow us
|

Updated on:May 29, 2024 | 8:05 AM

ಬೆಂಗಳೂರು, ಮೇ 29: ಬೈಯ್ಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯ್ಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಾರ್ಷಿಕ ಕೇಬಲ್ ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ಇಂದು (ಮೇ 29) ಮೂರು ಮೆಮು ರೈಲುಗಳು (MEMU Train) ರದ್ದುಗೊಳ್ಳಲಿವೆ. ಮತ್ತು ಎಂಟು ಮೆಮು ರೈಲುಗಳು ಭಾಗಶಃ ರದ್ದಾಗಿವೆ ಎಂದು ನೈಋತ್ಯ ರೈಲ್ವೆ ವಲಯ (South Western Railway) ತಿಳಿಸಿದೆ. ಹಾಗೆ ಭಟ್ಕಳ ನಿಲ್ದಾಣದಲ್ಲಿ ಮೇ 29 ರಿಂದ 31 ರವರೆಗೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳ್ಳಲಿವೆ ಎಂದು ಕೊಂಕಣ ರೈಲ್ವೆ ಮಾಹಿತಿ ನೀಡಿದೆ.

3 ವಿಶೇಷ ಮೆಮು ರೈಲು ರದ್ದು:

ರೈಲು ಸಂಖ್ಯೆ (01766) ವೈಟ್​​ಫಿಲ್ಡ್​-ಕೆಎಸ್​ಆರ್​ ಬೆಂಗಳೂರು ವಿಶೇಷ ಮೆಮು ರೈಲು, ಕೆಎಸ್​ಆರ್​​ ಬೆಂಗಳೂರು -ಬಂಗಾರಪೇಟ (06561) ಮತ್ತು ಬಂಗಾರಪೇಟ-ಕೆಎಸ್​ಆರ್​ ಬೆಂಗಳೂರು (01773) ವಿಶೇಷ ಮೆಮು ರೈಲು ಬುಧವಾರ (ಮೇ 29) ತಾತ್ಕಾಲಿಕವಾಗಿ ರದ್ದಾಗಿವೆ.

8 ವಿಶೇಷ ಮೆಮು ಭಾಗಶಃ ರದ್ದು:

  • ರೈಲು ಸಂಖ್ಯೆ (06389) ಕೆಎಸ್​ಆರ್​ ಬೆಂಗಳೂರು-ಬಂಗಾರಪೇಟ ಮೆಮು ವಿಶೇಷ ರೈಲು ಕೆಎಸ್​ಆರ್​ ಬೆಂಗಳೂರು-ವೈಟ್​ಫಿಲ್ಡ್​ ನಡುವೆ ಭಾಗಶಃ ರದ್ದಾಗಲಿದೆ.
  • ರೈಲು ಸಂಖ್ಯೆ (06535) ಚಿಕ್ಕಬಳ್ಳಾಪುರ-ಬೆಂಗಳೂರು ಕಂಟೋನ್ಮೆಂಟ್​ ಮೆಮು ವಿಶೇಷ ರೈಲು ಯಲಹಂಕ-ಬೆಂಗಳೂರು ಕಂಟೋನ್ಮೆಂಟ್​ ನಡುವೆ ಭಾಗಶಃ ರದ್ದಾಗಲಿದೆ.
  • ರೈಲು ಸಂಖ್ಯೆ (01776) ಮರಿಕುಪ್ಪಂ-ಕೆಎಸ್​ಆರ್​ ಬೆಂಗಳೂರು ಮೆಮು ವಿಶೇಷ ರೈಲು ಕೆಎಸ್​ಆರ್​ ಬೆಂಗಳೂರು-ಕೃಷ್ಣರಾಜಪುರಂ ಮಧ್ಯೆ ಭಾಗಶಃ ರದ್ದಾಗಲಿದೆ.
  • ರೈಲು ಸಂಖ್ಯೆ (01775) ಕೆಎಸ್​ಆರ್​ ಬೆಂಗಳೂರು-ಮರಿಕುಪ್ಪಂ ಮೆಮು ವಿಶೇಷ ರೈಲು ಕೆಎಸ್​ಆರ್​ ಬೆಂಗಳೂರು-ಕೃಷ್ಣರಾಜಪುರಂ ನಡುವೆ ಭಾಗಶಃ ರದ್ದಾಗಲಿದೆ.
  • ರೈಲು ಸಂಖ್ಯೆ (01793) ಮರಿಕುಪ್ಪಂ-ಕೆಎಸ್​ಆರ್​ ಬೆಂಗಳೂರು ಮೆಮು ವಿಶೇಷ ರೈಲು ಬಂಗಾರಪೇಟ-ಕೃಷ್ಣರಾಜಪುರಂ ನಡುವೆ ಭಾಗಶಃ ರದ್ದಾಗಲಿದೆ.
  • ರೈಲು ಸಂಖ್ಯೆ (01794) ಕೃಷ್ಣರಾಜಪುರಂ-ಮರಿಕುರಪ್ಪಂ ಮೆಮು ವಿಶೇಷ ರೈಲು ಕೃಷ್ಣರಾಜಪುರಂ-ಬಂಗಾರಪೇಟ ನಡುವೆ ಭಾಗಶಃ ರದ್ದಾಗಲಿದೆ.
  • ರೈಲು ಸಂಖ್ಯೆ (06529) ಕೆಎಸ್​ಆರ್​ ಬೆಂಗಳೂರು-ಕುಪ್ಪಂ ಮೆಮು ವಿಶೇಷ ರೈಲು ಕೆಎಸ್​ಆರ್​ ಬೆಂಗಳೂರು-ಕೃಷ್ಣರಾಜಪುರಂ ನಡುವೆ ಭಗಶಃ ರದ್ದಾಗಲಿದೆ.

ಇದನ್ನೂ ಓದಿ: ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು

2 ರೈಲುಗಳು ಭಾಗಶಃ ರದ್ದು

  • ಮೇ 29, ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಶಿರೂರು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಶಿರೂರು- ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • ಮೇ 30, ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಎಕ್ಸ್​ಪ್ರೆಸ್ ರೈಲು ಶಿರೂರು ನಿಲ್ದಾಣದಿಂದ ಮಧ್ಯಾಹ್ನ 2.35 ಗಂಟೆಗೆ ಪ್ರಾರಂಭವಾಗಲಿದ್ದು. ಮುರುಡೇಶ್ವರ ಮತ್ತು ಶಿರೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 am, Wed, 29 May 24

ತಾಜಾ ಸುದ್ದಿ
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..