AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ

ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ ವಲಯದ ಟ್ರೇನ್​​​ಗಳಲ್ಲಿ ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ
ಭಾರತೀಯ ರೈಲ್ವೆ
ವಿವೇಕ ಬಿರಾದಾರ
|

Updated on: Jan 22, 2024 | 7:37 AM

Share

ಬೆಂಗಳೂರು, ಜನವರಿ 22: ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ (South Western Railway) ವಲಯದ ಟ್ರೇನ್​​​ಗಳಲ್ಲಿ (Train) ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ. 2023ರಲ್ಲಿ ಒಟ್ಟು 6,27,014 ಟಿಕೆಟ್ ರಹಿತ ಪ್ರಯಾಣದ ಪ್ರಕರಣಗಳು ದಾಖಲಾಗಿವೆ.

2023ರಲ್ಲಿ ಬೆಂಗಳೂರು ವಿಭಾಗವು 3,68,205 ಪ್ರಯಾಣಿಕರಿಗೆ ದಂಡ ವಿಧಿಸಿದ್ದು, 28.26 ಕೋಟಿ ರೂ. ಸಂಗ್ರಹವಾಗಿದೆ. ಈ ಹಿಂದೆ ಸಂಗ್ರಹವಾಗಿದ್ದ ದಂಡದ ಹಣಕ್ಕಿಂತ ಇದು ಅತ್ಯಧಿಕವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸುವುದಾದರೇ ಶೇ9.95 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೇರ ಪ್ರಸಾರ

ಕೇವಲ 2023ರ ಡಿಸೆಂಬರ್​ನಲ್ಲಿ, ನೈಋತ್ಯ ರೈಲ್ವೆ ಇಲಾಖೆಯು 72,041 ಪ್ರಕರಣಗಳನ್ನು ದಾಖಲಿಸಿದ್ದು, 5.13 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ. ರೈಲ್ವೇ ಕಾಯಿದೆ 1989 ರ ಸೆಕ್ಷನ್ 138 ರ ಪ್ರಕಾರ, ಯಾವುದೇ ಪ್ರಯಾಣಿಕರು ಸರಿಯಾದ ಪಾಸ್/ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಂಡುಬಂದಲ್ಲಿ, 250 ರೂ. ದಂಡ ಅಥವಾ ಶುಲ್ಕಕ್ಕೆ​ ಸಮಾನವಾಗಿರುತ್ತದೆ. (ಅವರು ಪ್ರಯಾಣಿಸಿದ ದೂರಕ್ಕೆ ಅಥವಾ ರೈಲು ಪ್ರಾರಂಭವಾದ ನಿಲ್ದಾಣದಿಂದ ಸಾಮಾನ್ಯ ಏಕ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳು ಅಂದರೆ ₹ 250) ಯಾವುದು ಹೆಚ್ಚಿದೆಯೋ ಅದನ್ನು ವಿಧಿಸಲಾಗುತ್ತದೆ.

ಈ ಆರ್ಥಿಕ ವರ್ಷದಲ್ಲಿ ಅಂದರೆ ಏಪ್ರಿಲ್ 1 ರಿಂದ ಡಿಸೆಂಬರ್ 31, 2023 ರವರೆಗೆ ಟಿಕೆಟ್ ತಪಾಸಣೆ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ