ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ

ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ ವಲಯದ ಟ್ರೇನ್​​​ಗಳಲ್ಲಿ ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ
ಭಾರತೀಯ ರೈಲ್ವೆ
Follow us
|

Updated on: Jan 22, 2024 | 7:37 AM

ಬೆಂಗಳೂರು, ಜನವರಿ 22: ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ (South Western Railway) ವಲಯದ ಟ್ರೇನ್​​​ಗಳಲ್ಲಿ (Train) ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ. 2023ರಲ್ಲಿ ಒಟ್ಟು 6,27,014 ಟಿಕೆಟ್ ರಹಿತ ಪ್ರಯಾಣದ ಪ್ರಕರಣಗಳು ದಾಖಲಾಗಿವೆ.

2023ರಲ್ಲಿ ಬೆಂಗಳೂರು ವಿಭಾಗವು 3,68,205 ಪ್ರಯಾಣಿಕರಿಗೆ ದಂಡ ವಿಧಿಸಿದ್ದು, 28.26 ಕೋಟಿ ರೂ. ಸಂಗ್ರಹವಾಗಿದೆ. ಈ ಹಿಂದೆ ಸಂಗ್ರಹವಾಗಿದ್ದ ದಂಡದ ಹಣಕ್ಕಿಂತ ಇದು ಅತ್ಯಧಿಕವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸುವುದಾದರೇ ಶೇ9.95 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೇರ ಪ್ರಸಾರ

ಕೇವಲ 2023ರ ಡಿಸೆಂಬರ್​ನಲ್ಲಿ, ನೈಋತ್ಯ ರೈಲ್ವೆ ಇಲಾಖೆಯು 72,041 ಪ್ರಕರಣಗಳನ್ನು ದಾಖಲಿಸಿದ್ದು, 5.13 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ. ರೈಲ್ವೇ ಕಾಯಿದೆ 1989 ರ ಸೆಕ್ಷನ್ 138 ರ ಪ್ರಕಾರ, ಯಾವುದೇ ಪ್ರಯಾಣಿಕರು ಸರಿಯಾದ ಪಾಸ್/ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಂಡುಬಂದಲ್ಲಿ, 250 ರೂ. ದಂಡ ಅಥವಾ ಶುಲ್ಕಕ್ಕೆ​ ಸಮಾನವಾಗಿರುತ್ತದೆ. (ಅವರು ಪ್ರಯಾಣಿಸಿದ ದೂರಕ್ಕೆ ಅಥವಾ ರೈಲು ಪ್ರಾರಂಭವಾದ ನಿಲ್ದಾಣದಿಂದ ಸಾಮಾನ್ಯ ಏಕ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳು ಅಂದರೆ ₹ 250) ಯಾವುದು ಹೆಚ್ಚಿದೆಯೋ ಅದನ್ನು ವಿಧಿಸಲಾಗುತ್ತದೆ.

ಈ ಆರ್ಥಿಕ ವರ್ಷದಲ್ಲಿ ಅಂದರೆ ಏಪ್ರಿಲ್ 1 ರಿಂದ ಡಿಸೆಂಬರ್ 31, 2023 ರವರೆಗೆ ಟಿಕೆಟ್ ತಪಾಸಣೆ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ