AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ

ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ ವಲಯದ ಟ್ರೇನ್​​​ಗಳಲ್ಲಿ ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ
ಭಾರತೀಯ ರೈಲ್ವೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jan 22, 2024 | 7:37 AM

Share

ಬೆಂಗಳೂರು, ಜನವರಿ 22: ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ (South Western Railway) ವಲಯದ ಟ್ರೇನ್​​​ಗಳಲ್ಲಿ (Train) ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ. 2023ರಲ್ಲಿ ಒಟ್ಟು 6,27,014 ಟಿಕೆಟ್ ರಹಿತ ಪ್ರಯಾಣದ ಪ್ರಕರಣಗಳು ದಾಖಲಾಗಿವೆ.

2023ರಲ್ಲಿ ಬೆಂಗಳೂರು ವಿಭಾಗವು 3,68,205 ಪ್ರಯಾಣಿಕರಿಗೆ ದಂಡ ವಿಧಿಸಿದ್ದು, 28.26 ಕೋಟಿ ರೂ. ಸಂಗ್ರಹವಾಗಿದೆ. ಈ ಹಿಂದೆ ಸಂಗ್ರಹವಾಗಿದ್ದ ದಂಡದ ಹಣಕ್ಕಿಂತ ಇದು ಅತ್ಯಧಿಕವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸುವುದಾದರೇ ಶೇ9.95 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೇರ ಪ್ರಸಾರ

ಕೇವಲ 2023ರ ಡಿಸೆಂಬರ್​ನಲ್ಲಿ, ನೈಋತ್ಯ ರೈಲ್ವೆ ಇಲಾಖೆಯು 72,041 ಪ್ರಕರಣಗಳನ್ನು ದಾಖಲಿಸಿದ್ದು, 5.13 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ. ರೈಲ್ವೇ ಕಾಯಿದೆ 1989 ರ ಸೆಕ್ಷನ್ 138 ರ ಪ್ರಕಾರ, ಯಾವುದೇ ಪ್ರಯಾಣಿಕರು ಸರಿಯಾದ ಪಾಸ್/ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಂಡುಬಂದಲ್ಲಿ, 250 ರೂ. ದಂಡ ಅಥವಾ ಶುಲ್ಕಕ್ಕೆ​ ಸಮಾನವಾಗಿರುತ್ತದೆ. (ಅವರು ಪ್ರಯಾಣಿಸಿದ ದೂರಕ್ಕೆ ಅಥವಾ ರೈಲು ಪ್ರಾರಂಭವಾದ ನಿಲ್ದಾಣದಿಂದ ಸಾಮಾನ್ಯ ಏಕ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳು ಅಂದರೆ ₹ 250) ಯಾವುದು ಹೆಚ್ಚಿದೆಯೋ ಅದನ್ನು ವಿಧಿಸಲಾಗುತ್ತದೆ.

ಈ ಆರ್ಥಿಕ ವರ್ಷದಲ್ಲಿ ಅಂದರೆ ಏಪ್ರಿಲ್ 1 ರಿಂದ ಡಿಸೆಂಬರ್ 31, 2023 ರವರೆಗೆ ಟಿಕೆಟ್ ತಪಾಸಣೆ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!