AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ

ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ ವಲಯದ ಟ್ರೇನ್​​​ಗಳಲ್ಲಿ ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ.

ನೈರುತ್ಯ ರೈಲ್ವೆ ವಲಯದ ಟ್ರೇನ್​​ಗಳಲ್ಲಿ ಟಿಕೆಟ್​ ರಹಿತ ಪ್ರಯಾಣ: 46 ಕೋಟಿ ರೂ. ದಂಡ ಸಂಗ್ರಹ
ಭಾರತೀಯ ರೈಲ್ವೆ
ವಿವೇಕ ಬಿರಾದಾರ
|

Updated on: Jan 22, 2024 | 7:37 AM

Share

ಬೆಂಗಳೂರು, ಜನವರಿ 22: ಟಿಕೆಟ್​ ರಹಿತ ಪ್ರಯಾಣ ದಂಡಕ್ಕೆ ಆಹ್ವಾನವೆಂದು ಸಾವರ್ಜನಿಕ ವಾಹನಗಳಲ್ಲಿ ಫಲಕಗಳನ್ನು ಹಾಕಿರುತ್ತಾರೆ. ಆದರೂ ಕೂಡ ನೈಋತ್ಯ ರೈಲ್ವೆ (South Western Railway) ವಲಯದ ಟ್ರೇನ್​​​ಗಳಲ್ಲಿ (Train) ಟಿಕೆಟ್​ ರಹಿತವಾಗಿ ಸಂಚರಿಸಿದ ಪ್ರಯಾಣಿಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದು, ಕಳೆದ ವರ್ಷ 2023ರ ಡಿಸೆಂಬರ್​​ ವರೆಗೆ​ 46.31 ಕೋಟಿ ರೂ. ಸಂಗ್ರಹವಾಗಿದೆ. 2023ರಲ್ಲಿ ಒಟ್ಟು 6,27,014 ಟಿಕೆಟ್ ರಹಿತ ಪ್ರಯಾಣದ ಪ್ರಕರಣಗಳು ದಾಖಲಾಗಿವೆ.

2023ರಲ್ಲಿ ಬೆಂಗಳೂರು ವಿಭಾಗವು 3,68,205 ಪ್ರಯಾಣಿಕರಿಗೆ ದಂಡ ವಿಧಿಸಿದ್ದು, 28.26 ಕೋಟಿ ರೂ. ಸಂಗ್ರಹವಾಗಿದೆ. ಈ ಹಿಂದೆ ಸಂಗ್ರಹವಾಗಿದ್ದ ದಂಡದ ಹಣಕ್ಕಿಂತ ಇದು ಅತ್ಯಧಿಕವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸುವುದಾದರೇ ಶೇ9.95 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ರೈಲು ನಿಲ್ದಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭ ನೇರ ಪ್ರಸಾರ

ಕೇವಲ 2023ರ ಡಿಸೆಂಬರ್​ನಲ್ಲಿ, ನೈಋತ್ಯ ರೈಲ್ವೆ ಇಲಾಖೆಯು 72,041 ಪ್ರಕರಣಗಳನ್ನು ದಾಖಲಿಸಿದ್ದು, 5.13 ಕೋಟಿ ರೂ. ದಂಡವನ್ನು ಸಂಗ್ರಹಿಸಿದೆ. ರೈಲ್ವೇ ಕಾಯಿದೆ 1989 ರ ಸೆಕ್ಷನ್ 138 ರ ಪ್ರಕಾರ, ಯಾವುದೇ ಪ್ರಯಾಣಿಕರು ಸರಿಯಾದ ಪಾಸ್/ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಂಡುಬಂದಲ್ಲಿ, 250 ರೂ. ದಂಡ ಅಥವಾ ಶುಲ್ಕಕ್ಕೆ​ ಸಮಾನವಾಗಿರುತ್ತದೆ. (ಅವರು ಪ್ರಯಾಣಿಸಿದ ದೂರಕ್ಕೆ ಅಥವಾ ರೈಲು ಪ್ರಾರಂಭವಾದ ನಿಲ್ದಾಣದಿಂದ ಸಾಮಾನ್ಯ ಏಕ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳು ಅಂದರೆ ₹ 250) ಯಾವುದು ಹೆಚ್ಚಿದೆಯೋ ಅದನ್ನು ವಿಧಿಸಲಾಗುತ್ತದೆ.

ಈ ಆರ್ಥಿಕ ವರ್ಷದಲ್ಲಿ ಅಂದರೆ ಏಪ್ರಿಲ್ 1 ರಿಂದ ಡಿಸೆಂಬರ್ 31, 2023 ರವರೆಗೆ ಟಿಕೆಟ್ ತಪಾಸಣೆ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ