AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯ ಹಲವು ರೈಲು ರದ್ದು, ಕೆಲವು ಭಾಗಶಃ ರದ್ದು, ಇಲ್ಲಿದೆ ಮಾಹಿತಿ

ಕೆಂಗೇರಿ-ಹೆಜ್ಜಾಲ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ. 15 ರಲ್ಲಿ ಇಂಜಿನಿಯರಿಂಗ್ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳ ಸಂಚಾರ ರದ್ದುಗೊಂಡಿವೆ. ಭಾಗಶಃ ರದ್ದುಗೊಂಡಿವೆ. ಈ ಕುರಿತು ನೈಋತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನೈಋತ್ಯ ರೈಲ್ವೆಯ ಹಲವು ರೈಲು ರದ್ದು, ಕೆಲವು ಭಾಗಶಃ ರದ್ದು, ಇಲ್ಲಿದೆ ಮಾಹಿತಿ
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 02, 2024 | 8:32 AM

Share

ಬೆಂಗಳೂರು, ಮಾರ್ಚ್​​ 02: ಕೆಂಗೇರಿ-ಹೆಜ್ಜಾಲ (Kengeri-Hejjal) ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ. 15 ರಲ್ಲಿ ಇಂಜಿನಿಯರಿಂಗ್ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳ ಸಂಚಾರ ರದ್ದುಗೊಂಡಿವೆ (Train Cancelled). ಭಾಗಶಃ ರದ್ದುಗೊಂಡಿವೆ. ಈ ಕುರಿತು ನೈಋತ್ಯ ರೈಲ್ವೆ (South Western Railway) ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮಾರ್ಚ್​​ 6 ರಿಂದ 12ರ ವರೆಗೆ ಈ ಕೆಳಗಿನ ರೈಲುಗಳು ರದ್ದಾಗಲಿವೆ ಅಥವಾ ಭಾಗಶಃ ರದ್ದಾಗಲಿವೆ. ಇನ್ನು ಕೆಲವು ರೈಲುಗಳು ವಿಳಂಬವಾಗಿ ಸಹ ಸಂಚಾರ ನಡೆಸಲಿವೆ.

ರದ್ದುಗೊಂಡಿರುವ ರೈಲುಗಳು

  1. ರೈಲು ಸಂಖ್ಯೆ 16021: ಮಾರ್ಚ್ 6 ಮತ್ತು 7 ರಂದು ಡಾ. MGR ಚೆನ್ನೈ ಸೆಂಟ್ರಲ್-ಮೈಸೂರು ಮಧ್ಯೆ ಸಂಚರಿಸುವ ಡೈಲಿ ಎಕ್ಸ್‌ಪ್ರೆಸ್
  2. ರೈಲು ಸಂಖ್ಯೆ 20623: ಮಾರ್ಚ್ 7 ಮತ್ತು 8 ರಂದು ಮೈಸೂರು-KSR ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್
  3. ರೈಲು ಸಂಖ್ಯೆ 20624: ಮಾರ್ಚ್ 7 ಮತ್ತು 8 ರಂದು KSR ಬೆಂಗಳೂರು-ಮೈಸೂರು ಡೈಲಿ ಎಕ್ಸ್‌ಪ್ರೆಸ್.
  4. ರೈಲು ಸಂಖ್ಯೆ 16022: ಮಾರ್ಚ್ 7 ಮತ್ತು 8 ರಂದು ಮೈಸೂರು-ಡಾ. MGR ಚೆನ್ನೈ ಸೆಂಟ್ರಲ್ ಡೈಲಿ ಎಕ್ಸ್‌ಪ್ರೆಸ್
  5. ರೈಲು ಸಂಖ್ಯೆ 06267: ಮಾರ್ಚ್ 7 ಮತ್ತು 12 ರಂದು ಅರಸೀಕೆರೆ-ಮೈಸೂರು ಡೈಲಿ ಎಕ್ಸ್‌ಪ್ರೆಸ್
  6. ರೈಲು ಸಂಖ್ಯೆ 06269: ಮಾರ್ಚ್ 7 ಮತ್ತು 12 ರಂದು ಮೈಸೂರು-SMVT ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್
  7. ರೈಲು ಸಂಖ್ಯೆ 06560: ಮಾರ್ಚ್ 7 ಮತ್ತು 12 ರಂದು ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ.
  8. ರೈಲು ಸಂಖ್ಯೆ 06270: ಮಾರ್ಚ್ 7 ಮತ್ತು 12 ರಂದು SMVT ಬೆಂಗಳೂರು-ಮೈಸೂರು ಡೈಲಿ ಎಕ್ಸ್‌ಪ್ರೆಸ್ ವಿಶೇಷ
  9. ರೈಲು ಸಂಖ್ಯೆ 06268: ಮಾರ್ಚ್ 8 ಮತ್ತು 13 ರಂದು ಮೈಸೂರು-ಅರಸಿಕೆರೆ ಎಕ್ಸ್‌ಪ್ರೆಸ್
  10. ರೈಲು ಸಂಖ್ಯೆ 06559: ಮಾರ್ಚ್ 8 ಮತ್ತು 13 ರಂದು KSR ಬೆಂಗಳೂರು-ಮೈಸೂರು ಮೆಮು ವಿಶೇಷ
  11. ರೈಲು ಸಂಖ್ಯೆ 01763: ಮಾರ್ಚ್ 8 ಮತ್ತು 13 ರಂದು KSR ಬೆಂಗಳೂರು-ಚನ್ನಪಟ್ಟಣ ಮೆಮು ವಿಶೇಷ

ಇದನ್ನೂ ಓದಿ: ರಾಜ್ಯದ 15 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ಭಾಗಶಃ ರದ್ದಾದ ರೈಲುಗಳು

  1. ರೈಲು ಸಂಖ್ಯೆ 06526: ಮಾರ್ಚ್​ 7 ಮತ್ತು 12 ರಂದು ಮೈಸೂರು- KSR ಬೆಂಗಳೂರು ವಿಶೇಷ ರೈಲು ಚನ್ನಪಟ್ಟಣ- KSR ಬೆಂಗಳೂರು ಮಧ್ಯೆ ಸಂಚಾರ ನಡೆಸುವುದಿಲ್ಲ.

ರೈಲು ಸಂಚಾರ ವಿಳಂಬ

  1. ರೈಲು ಸಂಖ್ಯೆ 16220: ಮಾರ್ಚ್​ 7 ರಂದು ತಿರುಪತಿ-ಚಾಮರಾಜನಗರ ದೈನಂದಿನ ಎಕ್ಸ್‌ಪ್ರೆಸ್ 30 ನಿಮಿಷ ತಡವಾಗಲಿದೆ.
  2. ರೈಲು ಸಂಖ್ಯೆ 16231: ಮಾರ್ಚ್​ 12 ರಂದು ಮೈಸೂರು ಡೈಲಿ ಎಕ್ಸ್‌ಪ್ರೆಸ್, ಕೆಂಗೇರಿ ನಿಲ್ದಾಣದಲ್ಲಿ 10 ನಿಮಿಷಗಳ ಕಾಲ ತಡವಾಗಲಿದೆ.
  3. ರೈಲು ಸಂಖ್ಯೆ 16228: ಮಾರ್ಚ್​ 12 ರಂದು ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್ ನಾಯ್ರಾಂಡನಹಳ್ಳಿ ನಿಲ್ದಾಣದಲ್ಲಿ 10 ನಿಮಿಷಗಳ ಕಾಲ ತಡವಾಗಲಿದೆ.
  4. ರೈಲು ಸಂಖ್ಯೆ 16586: ಮಾರ್ಚ್​ 12 ರಂದು ಮುರ್ಡೇಶ್ವರ-SMVT ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ 15 ನಿಮಿಷಗಳ ಕಾಲ ತಡವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್