AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Bengaluru Express: ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ.

Hubballi Bengaluru Express: ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jul 07, 2023 | 10:22 PM

Share

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು (Hubballi Bengaluru Express) ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ. ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ನೈಋತ್ಯ ರೈಲ್ವೆ (SWR) ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಹುಬ್ಬಳ್ಳಿಯಿಂದ ಹೊರಟ ಎಕ್ಸ್‌ಪ್ರೆಸ್ ರೈಲಿಗೆ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣ ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ಇದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್​ಗಳು ಮತ್ತು ಏಳು ಸ್ಲೀಪರ್ ಕೋಚ್​ಗಳು ಸೇರಿದಂತೆ 16 ಕೋಚ್‌ಗಳನ್ನು ಹೊಂದಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲಿನ ಶೇಕಡಾ 34 ಕ್ಕಿಂತ ಕಡಿಮೆ ಸೀಟುಗಳಷ್ಟೇ ಭರ್ತಿಯಾಗುತ್ತಿವೆ. ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಪ್ರಾರಂಭವಾದಾಗಿನಿಂದ, ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಈ ರೈಲನ್ನು ನಷ್ಟದೊಂದಿಗೆ ನಿರ್ವಹಿಸಲಾಗುತ್ತಿದೆ. ಹೀಗಾಗಿ ಜುಲೈ 16ರಿಂದ ರೈಲನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ

ಇತ್ತೀಚೆಗೆ ಆರಂಭಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೂಡ ಬೆಂಗಳೂರಿನಿಂದ ಬೆಳಗ್ಗೆ ಹೊರಟು ಮಧ್ಯಾಹ್ನದ ಮೊದಲು ಹುಬ್ಬಳ್ಳಿ ತಲುಪುವುದನ್ನು ಸ್ಮರಿಸಬಹುದು. ಇದು ಮಧ್ಯಾಹ್ನ ಹುಬ್ಬಳ್ಳಿಯಿಂದ ಹೊರಟು ಸಂಜೆ ತಡವಾಗಿ ಬೆಂಗಳೂರು ತಲುಪುತ್ತದೆ. ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲು ಕೂಡ ಈ ಮಾರ್ಗದಲ್ಲಿ ಸಂಚರಿಸುತ್ತಿದೆ.

ರಾಜ್ಯದ ಇನ್ನಷ್ಟು 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:06 pm, Fri, 7 July 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ