AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Bengaluru Express: ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ.

Hubballi Bengaluru Express: ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jul 07, 2023 | 10:22 PM

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು (Hubballi Bengaluru Express) ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ. ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ನೈಋತ್ಯ ರೈಲ್ವೆ (SWR) ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಹುಬ್ಬಳ್ಳಿಯಿಂದ ಹೊರಟ ಎಕ್ಸ್‌ಪ್ರೆಸ್ ರೈಲಿಗೆ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣ ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ಇದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್​ಗಳು ಮತ್ತು ಏಳು ಸ್ಲೀಪರ್ ಕೋಚ್​ಗಳು ಸೇರಿದಂತೆ 16 ಕೋಚ್‌ಗಳನ್ನು ಹೊಂದಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲಿನ ಶೇಕಡಾ 34 ಕ್ಕಿಂತ ಕಡಿಮೆ ಸೀಟುಗಳಷ್ಟೇ ಭರ್ತಿಯಾಗುತ್ತಿವೆ. ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಪ್ರಾರಂಭವಾದಾಗಿನಿಂದ, ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಈ ರೈಲನ್ನು ನಷ್ಟದೊಂದಿಗೆ ನಿರ್ವಹಿಸಲಾಗುತ್ತಿದೆ. ಹೀಗಾಗಿ ಜುಲೈ 16ರಿಂದ ರೈಲನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ

ಇತ್ತೀಚೆಗೆ ಆರಂಭಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೂಡ ಬೆಂಗಳೂರಿನಿಂದ ಬೆಳಗ್ಗೆ ಹೊರಟು ಮಧ್ಯಾಹ್ನದ ಮೊದಲು ಹುಬ್ಬಳ್ಳಿ ತಲುಪುವುದನ್ನು ಸ್ಮರಿಸಬಹುದು. ಇದು ಮಧ್ಯಾಹ್ನ ಹುಬ್ಬಳ್ಳಿಯಿಂದ ಹೊರಟು ಸಂಜೆ ತಡವಾಗಿ ಬೆಂಗಳೂರು ತಲುಪುತ್ತದೆ. ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲು ಕೂಡ ಈ ಮಾರ್ಗದಲ್ಲಿ ಸಂಚರಿಸುತ್ತಿದೆ.

ರಾಜ್ಯದ ಇನ್ನಷ್ಟು 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:06 pm, Fri, 7 July 23

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ