AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

ಹಬ್ಬಗಳ ಸೀಸನ್ ಶುರುವಾಗುತ್ತಿದ್ದಂತೆಯೇ ರೈಲುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ನಿವಾರಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು, ವಿಜಯಪುರ, ಬೆಳಗಾವಿ ಮಧ್ಯೆ ವಿಶೇಷ ರೈಲುಗಳನ್ನು ಘೋಷಿಸಿದೆ. ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 19, 2024 | 10:16 AM

Share

ಬೆಂಗಳೂರು, ಆಗಸ್ಟ್ 19: ಮುಂಬರುವ ಹಬ್ಬದ ಸೀಸನ್‌ಗಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಬೆಳಗಾವಿ ನಡುವೆ ಮತ್ತು ಎಸ್‌ಎಂವಿಟಿ ಬೆಂಗಳೂರಿನಿಂದ ವಿಜಯಪುರ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 5 ರಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.

ರೈಲು ಸಂಖ್ಯೆ 06555 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್, ಸೆಪ್ಟೆಂಬರ್ 5 ರಂದು ಸಂಜೆ 7.30 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 7.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06556 ಸೆಪ್ಟೆಂಬರ್ 6 ರಂದು ಬೆಳಿಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ.

ವಿಶೇಷ ರೈಲು ವೇಳಾಪಟ್ಟಿ

ರೈಲು ಸಂಖ್ಯೆ 06557 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 6 ರಂದು ರಾತ್ರಿ 10.15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06558 ಸೆಪ್ಟೆಂಬರ್ 8 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 4.30 ಕ್ಕೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ರೈಲು ಸಂಖ್ಯೆ 06577 ಎಸ್​ಎಂವಿಟಿ ಬೆಂಗಳೂರು-ವಿಜಯಪುರ-ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 5 ಮತ್ತು 7 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 2.05 ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06578 ವಿಜಯಪುರದಿಂದ ಸೆಪ್ಟೆಂಬರ್ 6 ಮತ್ತು 8ರಂದು ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ: ಕಪ್ಪು ಟಿ-ಶರ್ಟ್ ಧರಿಸಿ ಕಾರು ಚಲಾಯಿಸುತ್ತೀರಾ? ಸೀಟ್ ಬೆಲ್ಟ್ ಧರಿಸಿದ್ದರೂ ದಂಡಕ್ಕೆ ನೋಟಿಸ್ ಬರಬಹುದು ಎಚ್ಚರ!

ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೊರ್ನಗಲ್ಲು, ಹೊಸಪೇಟೆ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿದೆ.

ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ, ಪ್ರಯಾಣಿಕರು 139 ಗೆ ಕರೆ ಮಾಡಬಹುದು. ಐಆರ್​​ಸಿಟಿಸಿ ವೆಬ್​ಸೈಟ್​ ಮೂಲಕವೂ ಪರಿಶೀಲಿಸಿ ಬುಕಿಂಗ್ ಮಾಡಬಹದು ಎಂದು ರೈಲ್ವೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ