Karnataka Rain: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯ, ಆದರೂ ಅ.15ರವರೆಗೆ ಮಳೆ ಅಬ್ಬರ ಸಾಧ್ಯತೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯಗೊಂಡಿದ್ದರೂ ಅ.15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯ, ಆದರೂ ಅ.15ರವರೆಗೆ ಮಳೆ ಅಬ್ಬರ ಸಾಧ್ಯತೆ
Rain
Follow us
| Updated By: ನಯನಾ ರಾಜೀವ್

Updated on: Oct 02, 2022 | 1:29 PM

ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯಗೊಂಡಿದ್ದರೂ ಅ.15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅ.10ರ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ. ಜೂನ್ 1ರಿಂದ ಸೆ.30ರವರೆಗೆ ಇದ್ದ ನೈಋತ್ಯ ಮುಂಗಾರಿನಲ್ಲಿ ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಶೇ.20ಕ್ಕಿಂತ ಅಧಿಕ ಮಳೆಯಾಗಿದೆ.

ರಾಜ್ಯದ ವಾಡಿಕೆ ಪ್ರಮಾಣ 85.2 ಸೆ.ಮೀ, ಈ ಬಾರಿ 100.19  ಸೆ.ಮಿ ಮಳೆಯಾಗಿದೆ ದಕ್ಷಿಣ ಒಳನಾಡಿನ ವಾಡಿಕೆ 67.84ಸೆ.ಮೀ ಈ ಬಾರಿ 101.2 ಸೆ.ಮೀ. ಮಳೆಯಾಗಿದ್ದು ಶೇ.49 ರಷ್ಟು ಮಳೆ ಹೆಚ್ಚಳವಾಗಿದೆ.

ಉತ್ತರ ಒಳನಾಡಿನಲ್ಲಿ ವಾಡಿಕೆ 48.08 ಸೆಂ.ಮೀ ಇದ್ದು, ಈ ಬಾರಿ 65.11 ಸೆಂ.ಮೀ ಮಳೆಯಾಗಿದ್ದು, ಶೇ.34 ರಷ್ಟು ಮಳೆ ಹೆಚ್ಚಳವಾಗಿದೆ. ಕರಾವಳಿಯಲ್ಲಿ ವಾಡಿಕೆ 307.55 ಸೆಂ.ಮೀ, ಈ ಬಾರಿ 323.28 ಸೆಂ.ಮೀ ಮಳೆಯಾಗಿದೆ.

ವಾಡಿಕೆಗಿಂತ ಶೇ 60+ ಮಳೆ‌ಪಡೆದ ಜಿಲ್ಲೆಗಳು ಜಿಲ್ಲೆ- ಪಡೆದ ಮಳೆ- ವಾಡಿಕೆ ಮಳೆ ಮಂಡ್ಯ – 73 – 30.24 ತುಮಕೂರು – 76.9- 36.85 ರಾಮನಗರ – 81.4-44.6 ಚಿತ್ರದುರ್ಗ – 63.5-37.49 ಬೆಂಗಳೂರು ನಗರ – 86.56- 44.16 ಬೆಂ.ಗ್ರಾಮಾಂತರ – 80.3- 42.21 ಕೋಲಾರ – 75.85- 39.11 ದಾವಣಗೆರೆ – 63.55- 37.49

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಗದಗದ ಶಿರಹಟ್ಟಿಯಲ್ಲಿ 10 ಸೆಂ.ಮೀ ಮಳೆಯಾಗಿದೆ. ಕಂಪ್ಲಿ, ಶಿರಾಲಿ, ಲಕ್ಷ್ಮೇಶ್ವರ, ರಾಯಚೂರು, ಮಸ್ಕಿ, ಪಣಂಬೂರು, ಸುಬ್ರಹ್ಮಣ್ಯ, ಹೊನ್ನಾವರ, ಮಂಕಿ, ಹಳಿಯಾಳ, ಬೈಲಹೊಂಗಲ, ಹೆಬ್ಬೂರು, ಬ್ರಾಹ್ಮಾವರ, ಗೇರುಸೊಪ್ಪ, ಹುಕ್ಕೇರಿ, ಸಂಕೇಶ್ವರ, ಟಿ ನರಸೀಪುರ, ಸಂಡೂರು, ದಾವಣಗೆರೆ, ಉಡುಪಿ, ಕೋಟ, ಕುಮಟಾ, ಕಿರವತ್ತಿ, ಅಣ್ಣಿಗೇರಿ, ಚಿಕ್ಕೋಡಿ, ನಿಪ್ಪಾಣಿ, ಮತ್ತಿಕೊಪ್ಪ, ಮುದಗಲ್, ಆಲಮಟ್ಟಿ, ಕೊಳ್ಳೇಗಾಲದಲ್ಲಿ ಮಳೆಯಾಗಿದೆ. ಗಂಗಾವತಿ, ಬೆಂಗಳೂರುನಗರ, ಹೆಸರಘಟ್ಟ, ಹಿರಿಯೂರು, ನಾಯಕನಹಟ್ಟಿ, ಹೊಸಕೋಟೆ, ಗೌರಿಬಿದನೂರು, ಹೊಸಕೋಟೆ, ಕುಂದಾಪುರ, ಕಾರ್ಕಳ, ಬೆಳ್ತಂಗಡಿ, ಧರ್ಮಸ್ಥಳ, ಮಾಣಿ, ತೊಂಡೆಭಾವಿ, ಹಾನಗಲ್, ರಾಣೆಬೆನ್ನೂರಿನಲ್ಲಿ ಮಳೆಯಾಗಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಮೆರಿಕದ ಟೆಕ್ ಸಿಇಒಗಳಿಂದ ನರೇಂದ್ರ ಮೋದಿ ಶ್ಲಾಘನೆ
ಅಮೆರಿಕದ ಟೆಕ್ ಸಿಇಒಗಳಿಂದ ನರೇಂದ್ರ ಮೋದಿ ಶ್ಲಾಘನೆ
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು