AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Effect: ತೇಲಿ ಹೋಯ್ತು ಸೋಯಾಬೀನ್ ಬೆಳೆ; ಧಾರವಾಡದಲ್ಲಿ ಸುರಿದ ಮಳೆಗೆ ರೈತರು ಕಂಗಾಲು

ಧಾರವಾಡ ತಾಲೂಕಿನ ದಾಸನಕೊಪ್ಪ, ಲಕಮಾಪುರ ಸೇರಿದಂತೆ ಅನೇಕ ಹಳ್ಳಿಗಳ ರೈತರು ಅದಾಗಲೇ ಸೋಯಾ ಬೀನ್ ಬಿತ್ತನೆ ಮಾಡಿದ್ದರು. ಅಷ್ಟೇ ಅಲ್ಲ, ಬಹುತೇಕ ರೈತರು ಗೊಬ್ಬರವನ್ನು ಕೂಡ ಹಾಕಿದ್ದರು. ಆದರೆ ಇದೀಗ ಸುರಿದ ಮಳೆಯಿಂದಾಗಿ ನೀರು ಹೊಲಗಳಿಗೆ ನುಗ್ಗಿ ಬೀಜದ ಜೊತೆಗೆ ಗೊಬ್ಬರವನ್ನೂ ಹೊತ್ತೊಯ್ದಿದೆ. ಹೀಗೆ ನೀರು ಹೊಲಗಳಿಗೆ ನುಗ್ಗಲು ಕಾರಣ ಅಲ್ಲಲ್ಲಿ ನಿರ್ಮಿಸಲಾಗಿರುವ ಸೇತುವೆಗಳು.

Rain Effect: ತೇಲಿ ಹೋಯ್ತು ಸೋಯಾಬೀನ್ ಬೆಳೆ; ಧಾರವಾಡದಲ್ಲಿ ಸುರಿದ ಮಳೆಗೆ ರೈತರು ಕಂಗಾಲು
ಮಳೆಗೆ ಸೋಯಾಬೀನ್ ಬಿತ್ತನೆ ಸಂಪೂರ್ಣವಾಗಿ ಕೊಚ್ಚಿ ಹೋಗಿರುವ ದೃಶ್ಯ
TV9 Web
| Edited By: |

Updated on: Jun 05, 2021 | 5:23 PM

Share

ಧಾರವಾಡ: ಕಳೆದ ವರ್ಷದಿಂದ ರೈತರು ಕೊರೊನಾ ಸೋಂಕು, ಲಾಕ್​ಡೌನ್ ಹೀಗೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಈ ಬಾರಿಯ ಕೊರೊನಾ ಎರಡನೇ ಅಲೆ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯದಂತಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇದೆಲ್ಲದರ ಮಧ್ಯೆಯೇ ಈ ಬಾರಿ ಉತ್ತಮ ಮುಂಗಾರು ಇದ್ದಿದ್ದರಿಂದ ರೈತರು ಕೊಂಚ ಉತ್ಸಾಹದಿಂದ ಕೃಷಿ ಚಟುವಟಿಕೆ ಆರಂಭಿಸಿದ್ದರು. ಆದರೆ ನಿನ್ನೆ ಸುರಿದ ಮಳೆಗೆ ರೈತರ ಕನಸುಗಳೇ ಕೊಚ್ಚಿಕೊಂಡು ಹೋಗಿವೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು ಮಳೆರಾಯನ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ.

ಧಾರವಾಡದ ಬಹುತೇಕ ರೈತರು ಅದಾಗಲೇ ಬಿತ್ತನೆ ಕೆಲಸ ಮುಗಿಸಿದ್ದರು. ಅಲ್ಲದೆ ಮಳೆಯ ಆಗಮನಕ್ಕಾಗಿ ಕಾದು ಕೂತಿದ್ದರು. ಅವರ ನಿರೀಕ್ಷೆಯಂತೆಯೇ ಮಳೆಯೂ ಬಂತು. ಆದರೆ ಈ ಮಳೆಯಿಂದ ಎಷ್ಟು ಜನ ರೈತರಿಗೆ ಖುಷಿಯಾಗಿದೆಯೋ ಗೊತ್ತಿಲ್ಲ. ಆದರೆ ಅನೇಕ ರೈತರ ಕನಸು ನುಚ್ಚುನೂರಾಗಿದೆ. ಅದಾಗಲೇ ಬಿತ್ತನೆಯಾಗಿದ್ದ ಹೊಲಗಳಿಗೆ ನೀರು ನುಗ್ಗಿ, ಎಲ್ಲ ಬೀಜಗಳು ಕೊಚ್ಚಿ ಹೋಗಿದೆ.

ಧಾರವಾಡ ತಾಲೂಕಿನ ದಾಸನಕೊಪ್ಪ, ಲಕಮಾಪುರ ಸೇರಿದಂತೆ ಅನೇಕ ಹಳ್ಳಿಗಳ ರೈತರು ಅದಾಗಲೇ ಸೋಯಾ ಬೀನ್ ಬಿತ್ತನೆ ಮಾಡಿದ್ದರು. ಅಷ್ಟೇ ಅಲ್ಲ, ಬಹುತೇಕ ರೈತರು ಗೊಬ್ಬರವನ್ನು ಕೂಡ ಹಾಕಿದ್ದರು. ಆದರೆ ಇದೀಗ ಸುರಿದ ಮಳೆಯಿಂದಾಗಿ ನೀರು ಹೊಲಗಳಿಗೆ ನುಗ್ಗಿ ಬೀಜದ ಜೊತೆಗೆ ಗೊಬ್ಬರವನ್ನೂ ಹೊತ್ತೊಯ್ದಿದೆ. ಹೀಗೆ ನೀರು ಹೊಲಗಳಿಗೆ ನುಗ್ಗಲು ಕಾರಣ ಅಲ್ಲಲ್ಲಿ ನಿರ್ಮಿಸಲಾಗಿರುವ ಸೇತುವೆಗಳು.

ರಸ್ತೆಗಳ ಮಧ್ಯೆ ಅಲ್ಲಲ್ಲಿ ನಿರ್ಮಿಸಲಾಗಿರುವ ಸೇತುವೆಗಳ ಕೆಳಗಡೆಯಿಂದ ಹಳ್ಳ, ಕಾಲುವೆ ನೀರು ಹರಿದು ಹೋಗಬೇಕು. ಆದರೆ ಈ ಸೇತುವೆಗಳನ್ನು ಅವೈಜಾನಿಕವಾಗಿ ನಿರ್ಮಾಣ ಮಾಡಿರುವುದರಿಂದ ನೀರು ಸರಾಗವಾಗಿ ಹರಿದು ಹೋಗದೇ ರೈತರ ಜಮೀನುಗಳಿಗೆ ನುಗ್ಗುತ್ತಿದೆ. ಈ ಸಮಸ್ಯೆ ಒಂದು ಕಡೆಯಾದರೆ, ನಿರ್ಮಾಣವಾಗಿರುವ ಸೇತುವೆಗಳು ಒಂದೇ ವರ್ಷದಲ್ಲಿ ಬಿರುಕು ಬಿಟ್ಟಿರುವ ಸಮಸ್ಯೆ ಮತ್ತೊಂದು ಕಡೆಗೆ ಎಂದು ರೈತ ಮಡಿವಾಳಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಿತ್ತನೆ ಕಾರ್ಯ ಮಾಡಿದ್ದಾರೆ. ಆದರೆ ಇದೀಗ ಮಳೆರಾಯನ ಹೊಡೆತದಿಂದಾಗಿ ಅದೆಲ್ಲ ಹೊಳೆಯಲ್ಲಿ ಹೋಮ ಮಾಡಿದಂತಾಗಿದೆ. ಪ್ರತಿವರ್ಷ ಒಂದಿಲ್ಲಾ ಒಂದು ಸಮಸ್ಯೆಯಿಂದ ಬಳಲುತ್ತಿರುವ ರೈತರಿಗೆ ಈ ಬಾರಿ ಮುಂಗಾರು ಆರಂಭದಲ್ಲಿಯೇ ದೊಡ್ಡ ಹೊಡೆತ ನೀಡಿದೆ. ಸರ್ಕಾರ ಇದನ್ನೆಲ್ಲವನ್ನು ಅರಿತು ರೈತರ ನೆರವಿಗೆ ನಿಲ್ಲಬೇಕು ಎನ್ನುವುದು ಸದ್ಯ ರೈತರ ಒತ್ತಾಯವಾಗಿದೆ.

ಇದನ್ನೂ ಓದಿ:

ಅಕಾಲಿಕ ಮಳೆಗೆ ತುತ್ತಾದ ವಿಜಯಪುರ ರೈತರ ಬೆಳೆ; ಕೈಕೊಟ್ಟ ಮಾರುಕಟ್ಟೆ, ಹಾಕಿದ ಬಂಡವಾಳ ಮಣ್ಣು ಪಾಲು

ಬಾಗಲಕೋಟೆ ರೈತರಲ್ಲಿ ಆತಂಕ; ಕೊರೊನಾ ಎರಡನೇ ಅಲೆಗೆ ತತ್ತರಿಸಿದ ಟೊಮ್ಯಾಟೊ ಬೆಳೆಗಾರ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ