AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಪೇಸ್‌ಟೆಕ್‌ ಕೇಂದ್ರ ಸ್ಥಾಪನೆ, ಬಹುಮಹಡಿ ಕಟ್ಟಡಗಳಿಗೆ ಸೆಸ್: ಸಚಿವ ಸಂಪುಟ ನಿರ್ಧಾರ

ಕರ್ನಾಟಕ ಸಚಿವ ಸಂಪುಟವು ಬೆಂಗಳೂರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದ ಸ್ಪೇಸ್‌ಟೆಕ್ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಿದೆ. ಎಲ್ಲಾ ಎತ್ತರದ ಕಟ್ಟಡಗಳಿಗೆ ಶೇಕಡಾ 1 ರ ಸೆಸ್ ವಿಧಿಸಲೂ ನಿರ್ಧರಿಸಲಾಗಿದೆ. ರಾಯಚೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗೆ ತಿದ್ದುಪಡಿಗಳಿಗೂ ಅನುಮೋದನೆ ದೊರೆತಿದೆ.

ಬೆಂಗಳೂರಿನಲ್ಲಿ ಸ್ಪೇಸ್‌ಟೆಕ್‌ ಕೇಂದ್ರ ಸ್ಥಾಪನೆ, ಬಹುಮಹಡಿ ಕಟ್ಟಡಗಳಿಗೆ ಸೆಸ್: ಸಚಿವ ಸಂಪುಟ ನಿರ್ಧಾರ
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್​ಕೆ ಪಾಟೀಲ್ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಪ್ರಸನ್ನ ಗಾಂವ್ಕರ್​
| Edited By: |

Updated on:Jul 24, 2025 | 2:29 PM

Share

ಬೆಂಗಳೂರು, ಜುಲೈ 24: ಬೆಂಗಳೂರಿನಲ್ಲಿ 10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸ್ಪೇಸ್‌ಟೆಕ್‌ ಕೇಂದ್ರ ಸ್ಥಾಪಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ (Karnataka Cabinet)  ಅನುಮೋದನೆ ನೀಡಿದೆ. ಜತೆಗೆ, ರಾಜ್ಯದ ಎಲ್ಲ ಬಹುಮಹಡಿ, ಎತ್ತರದ ಕಟ್ಟಡಗಳಿಗೆ ಶೇ 1 ರ ಸೆಸ್ ವಿಧಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅವುಗಳಲ್ಲಿ ಸ್ಪೇಸ್‌ಟೆಕ್‌ ಕೇಂದ್ರ ಸ್ಥಾಪನೆ ಕೂಡ ಒಂದಾದಗಿದೆ. ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಹೆಚ್​ಕೆ ಪಾಟೀಲ್, ಸಂಪುಟ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ 2024-29 ತಿದ್ದುಪಡಿ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ರಾಯಚೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಪಾಟೀಲ್ ತಿಳಿಸಿದರು.

ರಾಜ್ಯದ ಎಲ್ಲ ಬಹುಮಹಡಿ, ಎತ್ತರದ ಕಟ್ಟಡಗಳಿಗೆ ಸೆಸ್

ಕರ್ನಾಟಕದ ಎಲ್ಲ ಬಹುಮಹಡಿ ಮತ್ತು ಎತ್ತರದ ಕಟ್ಟಡಗಳಿಗೆ ಶೇ 1ರಷ್ಟು ಸೆಸ್ ಹಾಕಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಅಗ್ನಿಶಾಮಕ ದಳದ ಕಾಯ್ದೆ ಅನ್ವಯ ಆಗುವ ಕಟ್ಟಡಗಳಿಗೆ ಶೇ 1 ರ ಸೆಸ್ ವಿಧಿಸಲಾಗುತ್ತದೆ. ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್​​ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ ಸೆಸ್ ವಿಧಿಸಲಾಗುತ್ತದೆ ಎಂದು ಹೆಚ್​ಕೆ ಪಾಟೀಲ್ ಮಾಹಿತಿ ನೀಡಿದರು.

ಇದನ್ನೂ ಓದಿ
Image
ಕಾಲ್ತುಳಿತ: ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಸಂಪುಟ ತೀರ್ಮಾನ
Image
ಮಹದಾಯಿ ವಿಚಾರದಲ್ಲಿ ಮತ್ತೆ ಗೋವಾ ಕ್ಯಾತೆ: ಸಾವಂತ್ ಹೇಳಿಕೆಗೆ ಕರ್ನಾಟಕ ಕಿಡಿ
Image
ದೆಹಲಿ ಪ್ರವಾಸಕ್ಕೆ ಮುನ್ನಾ ದಿನ ರಹಸ್ಯವಾಗಿ ಹಾಸನಕ್ಕೆ ತೆರಳಿ ಡಿಕೆಶಿ ಪೂಜೆ!

ಬೆಂಗಳೂರು ಕಾಲ್ತುಳಿತ ಪ್ರಕರಣ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿಯನ್ನು ಅಂಗೀಕರಿಸಲಾಗಿದೆ. ಘಟನೆಗೆ ಸಂಬಂಧಿಸಿದ ಖಾಸಗಿ ಸಂಸ್ಥೆ ವಿರುದ್ದ ಕಾನೂನು ಕ್ರಮ ಜರುಗಿಸಲಾಗುತ್ತದೆ. ಸಂಬಂಧಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ 2025ಕ್ಕೆ ಕ್ಯಾಬಿನೆಟ್ ಒಪ್ಪಿಗೆ

‘ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ 2025’ಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಬಾಲ್ಯ ವಿವಾಹ ತಡೆಯುವುದಕ್ಕಾಗಿ, ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಈ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ. ತೊಟ್ಟಿಲು ಮದುವೆಯಾದರೂ ಶಿಕ್ಷೆ ಇರಲಿದೆ. ಬಾಲ್ಯ ವಿವಾಹಕ್ಕೆ ಕುಟುಂಬಸ್ಥರು ಒಪ್ಪಿದರೂ ಕ್ರಮ ಕೈಗೊಳ್ಳಲಾಗುವುದು. ಯಾರೇ ಒತ್ತಡ ಹಾಕಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Thu, 24 July 25

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್