Karnataka Budget Session: ಪ್ರಿಯಾಂಕ್ ಖರ್ಗೆ ಮತ್ತು ಅಶ್ವಥ್ ನಾರಾಯಣ ನಡುವೆ ಸದನದಲ್ಲಿ ಮಾತು ಜೋರು, ಸ್ಪೀಕರ್ ಪ್ರೇಕ್ಷಕ

ಅರುಣ್​ ಕುಮಾರ್​ ಬೆಳ್ಳಿ

Updated on: Mar 06, 2025 | 3:43 PM

ಸದನದಲ್ಲಿ ಅಶೋಕ ವಿಷಯವೊಂದನ್ನು ಮಂಡಿಸುವಾಗ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಮಾತಿನ ಪ್ರಹಾರ ಶುರುವಿಟ್ಟುಕೊಳ್ಳುತ್ತಾರೆ. ಶರತ್ ಬಚ್ಚೇಗೌಡ ಮಾತಾಡುವಾಗ ಎಲ್ಲ ಶಾಂತವಾಗಿರುತ್ತದೆ. ಜಾರ್ಜ್ ಮತ್ತು ಅಶ್ವಥ್ ನಾರಾಯಣ ನಡುವೆ ಮಾತಿನ ಯುದ್ಧ ಅರಂಭವಾದಾಗ ಖರ್ಗೆ ಎಂಟರ್ ಆಗುತ್ತಾರೆ. ಖರ್ಗೆ ಮತ್ತು ಅಶ್ವಥ್ ರನ್ನು ಸುಮ್ಮನಾಗಿಸುವ ವ್ಯರ್ಥ ಪ್ರಯತ್ನ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾಡುತ್ತಾರೆ.

ಬೆಂಗಳೂರು ಮಾರ್ಚ್ 6: ಬಜೆಟ್ ಮಂಡನೆಯ (Budget presentation) ಮುನ್ನಾದಿನವಾದ ಇಂದು ಸದನದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಯಾರು ಹೆಚ್ಚು ಬಲಿಷ್ಠರು, ಯಾರು ದುರ್ಬಲರು ಅಂತ ಮಾತಿನ ಜಟಾಪಟಿ ನಡೆಯಿತು. ಆಡಳಿತ ಪಕ್ಷದಿಂದ ಕೆಜೆ ಜಾರ್ಜ್ ಮತ್ತು ಪ್ರಿಯಾಂಕ್ ಖರ್ಗೆ ಮಾತಾಡಿದರೆ ವಿರೋಧ ಪಕ್ಷದಿಂದ ಡಾ ಸಿಎನ್ ಅಶ್ವಥ್ ನಾರಾಯಣ ಮತ್ತು ವಿಪಕ್ಷ ನಾಯಕ ಆರ್ ಅಶೋಕ ಮಾತಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಅಶ್ವಥ್ ನಾರಾಯಣ ಸಚಿವನಾಗಿದ್ದಾಗ ಕಿಯಾನಿಕ್ಸ್​ನಲ್ಲಿ ನಡೆದ ಅವ್ಯವಹಾರಕ್ಕೆ ನಾನು ಹೊಣೆಗಾರನೇ? ಪ್ರಿಯಾಂಕ್ ಖರ್ಗೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.