AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನಕ್ಕೆ ಗೈರು ಹಾಜರಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಬಗ್ಗೆ ಪತ್ರದ ಮೂಲಕ ಸ್ಪೀಕರ್ ಅಸಮಾಧಾನ

ವಿಧಾನಸಭೆ ಅಧಿವೇಶನ ಶಾಸಕರ ಸಾಂವಿಧಾನಿಕ‌ ಹಕ್ಕು. ಮುಂದಿನ ದಿನಗಳಲ್ಲಿ ನೀವು ಸದನಕ್ಕೆ ಗೈರಾಗುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಪತ್ರ ಬರೆದಿದ್ದಾರೆ.

ಅಧಿವೇಶನಕ್ಕೆ ಗೈರು ಹಾಜರಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಬಗ್ಗೆ ಪತ್ರದ ಮೂಲಕ ಸ್ಪೀಕರ್ ಅಸಮಾಧಾನ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: |

Updated on: Oct 14, 2022 | 1:52 PM

Share

ಬೆಂಗಳೂರು: ವಿಧಾನಸಭಾ ಅಧಿವೇಶನಕ್ಕೆ ಗೈರು ಹಾಜರಾಗಿರುವ ಶಾಸಕ ಕೆ.ಎಸ್. ಈಶ್ವರಪ್ಪ (KS Eshwarappa) ಮತ್ತು ರಮೇಶ್​ ಜಾರಕಿಹೊಳಿಗೆ (Ramesh Jarkiholi) ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದಿದ್ದಾರೆ. ವಿಧಾನಸಭಾ ಅಧಿವೇಶನಕ್ಕೆ ಗೈರುಹಾಜರಾಗಿದ್ದು ಏಕೆ? ಎಂದು ಪ್ರಶ್ನಿಸಿ ಕಾಗೇರಿ (Vishweshwar Hegde Kageri) ಪತ್ರ ಬರೆದು, ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 1 ವಾರದಿಂದ ಕೆಎಸ್​ ಈಶ್ವರಪ್ಪ ಅಧಿವೇಶನದ ಕಲಾಪದಲ್ಲಿ ಹಾಜರಾಗಿರಲಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಳಂಬದ ಬಗ್ಗೆ ಇರುವ ಅಸಮಾಧಾನದಿಂದ ಈಶ್ವರಪ್ಪ ಕಲಾಪಕ್ಕೆ ಹಾಜರಾಗಿಲ್ಲ ಎನ್ನಲಾಗುತ್ತಿದೆ.

ವಿಧಾನಸಭೆ ಅಧಿವೇಶನ ಶಾಸಕರ ಸಾಂವಿಧಾನಿಕ‌ ಹಕ್ಕು. ನೀವು ಸದನಕ್ಕೆ ಬರದೇ ಇದ್ದಿದ್ದು ನಮಗೆ ಅಸಂವಿಧಾನಿಕವೆನಿಸಿದೆ. ಸಾರ್ವಜನಿಕವಾಗಿ ಸದನಕ್ಕೆ ಹಾಜರಾಗಲ್ಲ ಎಂದು ಹೇಳಿರುವುದು ಕೂಡ ಒಪ್ಪಿತವಲ್ಲ. ಮುಂದಿನ ದಿನಗಳಲ್ಲಿ ನೀವು ಸದನಕ್ಕೆ ಗೈರಾಗುವುದಿಲ್ಲ ಎಂದು ಭಾವಿಸುತ್ತೇನೆ. ಸಾಂವಿಧಾನಿಕವಾಗಿ ನಡೆದುಕೊಳ್ಳಬೇಕಿರುವುದು ನಮ್ಮ ಕರ್ತವ್ಯ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ನಾಯಕರಾದ ಕೆಎಸ್​ ಈಶ್ವರಪ್ಪ, ರಮೇಶ್​ ಜಾರಕಿಹೊಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 10 ದಿನಗಳ ವಿಧಾನಮಂಡಲ ಅಧಿವೇಶನಕ್ಕೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಎಸ್​ ಈಶ್ವರಪ್ಪ ಗೈರು: ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನವೂ ಹೆಚ್ಚಾಗುತ್ತಿದೆ. ಕೆಎಸ್​ ಈಶ್ವರಪ್ಪ ಈ ಬಗ್ಗೆ ಈಗಾಗಲೇ ಹಲವು ಬಾರಿ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡಿದ್ದಾರೆ. ಬೇರೆ ಸಚಿವ ಸ್ಥಾನಗಳಿಗೂ ನನ್ನ ಪ್ರಕರಣಕ್ಕೂ ಸಹ ವ್ಯತ್ಯಾಸವಿದೆ. 40 ಪರ್ಸೆಂಟ್ ಕಮಿಷನ್​ನ ನನ್ನ ಪ್ರಕರಣದಲ್ಲಿ ತನಿಖಾ ಸಂಸ್ಥೆ ಕ್ಲೀನ್ ಚಿಟ್ ನೀಡಿದೆ. ನನಗೆ ಸಚಿವ ಸ್ಥಾನ ನೀಡದಿರೋ ಬಗ್ಗೆ ಅಸಮಾಧಾನವಿದೆ. ಆದರೂ ನಮ್ಮ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರಬೇಕು, ಹಾಗಾಗಿ ನಾನು ಸುಮ್ಮನಿದ್ದೇನೆ ಎಂದು ಕೆಎಸ್​ ಈಶ್ವರಪ್ಪ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್