AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಡರಾಪುರದ ಐತಿಹಾಸಿಕ ವಿಠಲ ಜಾತ್ರೆಗೆ ಕರ್ನಾಟಕದಿಂದ ತೆರಳುವ ಭಕ್ತರಿಗೆ ವಿಶೇಷ ಬಸ್ ವ್ಯವಸ್ಥೆ, ಗಮನಿಸಬೇಕಾದ ಅಂಶ ಇಲ್ಲಿದೆ

ಆಷಾಢ ಏಕಾದಶಿಯಂದು ಮಹಾರಾಷ್ಟ್ರದ ಪಂಡರಾಪುರದ ಐತಿಹಾಸಿಕ ವಿಠಲ ಜಾತ್ರೆಗೆ ಕರ್ನಾಟಕದಿಂದ ಹೋಗಲು ಬಯಸುವ ಭಕ್ತರಿಗೆ ವಿಶೇಷ ಸಾರಿಗೆ ಬಸ್​ಗಳ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸುತ್ತಿದೆ. ಗಮನದಲ್ಲಿಡಬೇಕಾದ ಅಂಶಗಳು ಇಲ್ಲಿವೆ ನೋಡಿ.

ಪಂಡರಾಪುರದ ಐತಿಹಾಸಿಕ ವಿಠಲ ಜಾತ್ರೆಗೆ ಕರ್ನಾಟಕದಿಂದ ತೆರಳುವ ಭಕ್ತರಿಗೆ ವಿಶೇಷ ಬಸ್ ವ್ಯವಸ್ಥೆ, ಗಮನಿಸಬೇಕಾದ ಅಂಶ ಇಲ್ಲಿದೆ
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jul 09, 2022 | 1:37 PM

Share

ವಿಜಯಪುರ: ಆಷಾಢ ಏಕಾದಶಿಯಂದು ಮಹಾರಾಷ್ಟ್ರದ ಪಂಡರಾಪುರದ ಐತಿಹಾಸಿಕ ವಿಠಲ ಜಾತ್ರೆ (Pandharpur Vitthal Festival)ಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಜಾತ್ರಾ ಮಹೋತ್ಸವದಲ್ಲಿ ಕರ್ನಾಟಕ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ಕೊರೋನಾ ಸೋಂಕು ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಕಾಣಿಸಿಕೊಳ್ಳದ ಈ ಆಚರಣೆಯನ್ನು ಈ ಬಾರಿ ನಡೆಸಲು ವಿಠಲ ದೇವಸ್ಥಾನ ಸಜ್ಜಾಗಿದೆ. ಈ ಜಾತ್ರೆಗೆ ದೇಶದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಈ ಮಹೋತ್ಸವದಲ್ಲಿ ಭಾಗವಹಿಸಲು ಹೋಗುವವರಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮುಂದಾಗಿದೆ. ವಿಜಯಪುರ ನಗರದಿಂದ ಜಾತ್ರೆಗೆ ತೆರಳುವ ಭಕ್ತರಿಗೆ ಸಾರಿಗೆ ಇಲಾಖೆ ಸೌಲಭ್ಯ ಕಲ್ಪಿಸುತ್ತಿದೆ.

ಇದನ್ನೂ ಓದಿ: Spiritual: ಮಾತೆಯರಿಗೆ ಕುಂತಿಯ ಆಶೀರ್ವಾದವೇನು? ‘ಭಾಗ್ಯವಂತಂ ಪ್ರಸೂಯೇತ’ ಎಂದರೇನು?

ಯಾವ ಕೇಂದ್ರಗಳಲ್ಲಿ ಬಸ್ ವ್ಯವಸ್ಥೆ?

ಪಂಡರಾಪುರಕ್ಕೆ ತೆರಳುವ ಯಾತ್ರಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ಕೇಂದ್ರಬಿಂದುಗಳಾದ ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ, ವಿಜಯಪುರ ವಿಭಾಗದ ಬಸವನ ಬಾಗೇವಾಡಿ ಘಟಕಗಳಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯಾತ್ರಾರ್ಥಿಗಳು ಘಟಕ ವ್ಯವಸ್ಥಾಪಕರ ಕಚೇರಿ ಸಂಖ್ಯೆ 7760992251, 7760992263, 7760992264ಕ್ಕೆ ಕರೆ ಮಾಡಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಚಾಣಕ್ಯ ಹೇಳಿರುವ ಈ ತತ್ವಗಳನ್ನು ಅನುಸರಿಸಿ

ಗಮನದಲ್ಲಿಡಬೇಕಾದ ಅಂಶ

ಪಂಡರಾಪುರಕ್ಕೆ ಹೋಗಲು ಬಯಸುವ ಭಕ್ತರಿಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮತ್ತು ಎಲ್ಲಾ ಘಟಕಗಳ ಬಸ್ ನಿಲ್ದಾಣಗಳಲ್ಲಿ ಮುಂಗಡ ಬಸ್ ಟಿಕೆಟ್‌ಗಳನ್ನು ಕಾಯ್ದಿರಿಸಲು ವ್ಯವಸ್ಥೆ ಮಾಡಲಾಗಿದೆ. ಒಂದೇ ಗುಂಪಿನಲ್ಲಿ ಪ್ರಯಾಣಿಸಲು ಇಚ್ಛಿಸುವ ಕನಿಷ್ಠ 45 ರಿಂದ 55 ಪ್ರಯಾಣಿಕರಿದ್ದರೆ ಅವರಿಗೆ ಮಾರ್ಗ ಮಧ್ಯದಲ್ಲಿರುವ ಯಾತ್ರಾ ಸ್ಥಳಗಳ ದರ್ಶನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಉಚಿತ ಆಹಾರ ವಿತರಣಾ ಕೇಂದ್ರಗಳಲ್ಲಿ ಊಟಕ್ಕೆ ಸಮಯವನ್ನು ನೀಡಲಾಗುತ್ತದೆ. ಘಟಕ ಕೇಂದ್ರ ಸ್ಥಳದಿಂದ ಹೆಚ್ಚುವರಿ ಬಸ್​ಗಳ ಹೊರತಾಗಿ, ಪ್ರಯಾಣಿಕರು ಬಯಸಿದರೆ ಅವರ ಊರಿನಿಂದ ನೇರವಾಗಿ ಪಂಡರಾಪುರಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

Published On - 1:37 pm, Sat, 9 July 22

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ