AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ

ಅಧಿವೇಶನ ನಡೆದ ಸಮಯದಲ್ಲಿ ಮಧ್ಯಾಹ್ನದ ಊಟದ ನಂತರ ಶಾಸಕರ ಹಾಜಾರಾತಿ ಕಡಿಮೆ ಆಗುತ್ತಿದೆ. ಇದನ್ನು ತಪ್ಪಿಸಲು ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್​ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಶಾಸಕರ ಕಿರು ನಿದ್ರೆಗಾಗಿ ವಿಶೇಷ ಕುರ್ಚಿ ವ್ಯವಸ್ಥೆ ಮಾಡಲಾಗಿದೆ.

ಅಧಿವೇಶನ ವೇಳೆ ಮಧ್ಯಾಹ್ನದ ಕಿರು ನಿದ್ರೆಗಾಗಿ ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ
ಅಧಿವೇಶನ
ವಿವೇಕ ಬಿರಾದಾರ
|

Updated on: Jul 19, 2024 | 12:31 PM

Share

ಬೆಂಗಳೂರು, ಜುಲೈ 19: ಕರ್ನಾಟಕ ಅಧಿವೇಶನ (Karnataka session) ನಡೆದ ಸಂದರ್ಭದಲ್ಲಿ, ಮಧ್ಯಾಹ್ನ ಊಟದ ಬಳಿಕ ಶಾಸಕರಿಗೆ (MLA) ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲು ವಿಧಾಸಭೆ ಸಭಾಧ್ಯಕ್ಷ ಯುಟಿ ಖಾದರ್ (UT Khader)​​ ನಿರ್ಧರಿಸಿದ್ದಾರೆ. ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು (ಜು.19) ಸಭಾಧ್ಯಕ್ಷ ಯುಟಿ ಖಾದರ್​ ಅವರು ಈ ವಿಷಯ ಪ್ರಸ್ತಾಪಿಸಿದರು. “ವಿಧಾಸಭೆ ಸದಸ್ಯರಿಗಾಗಿ ಬೆಳಗ್ಗೆ ಉಪಹಾರ, ಮಧ್ಯಾಹ್ನ ಉತ್ತಮ ಊಟದ ವ್ಯವಸ್ಥೆ ಮಾಡಲಾಗಿದೆ. ಊಟವಾದ ಮೇಲೆ ಕೆಲ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇನೆ ಎಂದು ಹೇಳಿ ಹೋದವರು ಮರಳಿ ಬರುವುದಿಲ್ಲ.”

“ಇದನ್ನು ತಪ್ಪಿಸಲು ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್ ಕುರ್ಚಿ ಹಾಕಲಾಗಿದೆ. ಶಾಸಕರು ಅದರ ಮೇಲೆ ಕಿರು ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್​ ಕುರ್ಚಿ ನಿಮಗೆ ಸರಿ ಅನಿಸಿದರೆ ಮುಂದಿನ ಅಧಿವೇಶನದಲ್ಲಿ ಈ ವ್ಯವಸ್ಥೆಯನ್ನು ಅಧಿಕೃತ್ಯವಾಗಿ ಜಾರಿಗೆ ತರುತ್ತೇನೆ” ಎಂದು ಸಭಾಧ್ಯಕ್ಷ ಯುಟಿ ಖಾದರ್​ ಸದಸ್ಯರಿಗೆ ಹೇಳಿದರು.

ಇದನ್ನೂ ಓದಿ: Karnataka legislative assembly session live: 4ನೇ ದಿನಕ್ಕೆ ಕಾಲಿಟ್ಟ ಅಧಿವೇಶನ, ಬಾವಿಗಿಳಿದು ಬಿಜೆಪಿ-ಜೆಡಿಎಸ್ ಧರಣಿ

ಕೆಲ ಶಾಸಕರು ಮಧ್ಯಾಹ್ನ ಊಟದ ಬಳಿಕ ಶಾಸಕರ ಭವನದ ಕೊಠಡಿಗೆ ಹೋಗುತ್ತಿದ್ದರು. ಶಾಸಕರ ಭವನದ ಕೊಠಡಿಗೆ ಹೋಗಿ ನಿದ್ದೆ ಮಾಡಿ, ಶಾಸಕರು ವಾಪಸ್ ಸದನಕ್ಕೆ ಬರುತ್ತಿರಲಿಲ್ಲ. ಇದರಿಂದ ಶಾಸಕರ ಹಾಜರಾತಿ ಕಡಿಮೆ ಇರುತ್ತಿತ್ತು. ಇದನ್ನು ತಪ್ಪಿಸಲು ಸಭಾಧ್ಯಕ್ಷ ಯುಟಿ ಖಾದರ್ ಈ ಪ್ರಯೋಗಕ್ಕೆ ಕೈ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್