
ಬೆಂಗಳೂರು, (ಜುಲೈ 20): ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮಾಡಿದ್ದ ಮನವಿಗೆ ಕೋರ್ಟ್ ಪುರಸ್ಕರಿಸಿದೆ. ಹೌದು…ಸ್ನೇಹಿತರು, ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪುರಸ್ಕರಿಸಿದ್ದು, ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಜೈಲಿನ ಮುಖ್ಯ ಅಧೀಕ್ಷಕರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದ್ದು, ಒಂದು ವೇಳೆ ಅನುಮತಿ ನಿರಾಕರಿಸಿದರೆ ಅದರ ಮಾಹಿತಿ ಪ್ರಜ್ವಲ್ಗೆ ನೀಡಲು ಸೂಚಿಸಿದೆ.
ಜೈಲಿನಲ್ಲಿ ಸ್ನೇಹಿತರು ಹಾಗೂ ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 20) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭಾಗಶಃ ಪುರಸ್ಕರಿಸಿದೆ. ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡಲು ಆದೇಶಿಸಿ ಜೈಲಿನ ಮುಖ್ಯ ಅಧೀಕ್ಷಕರಿಗೆ ಸೂಚನೆ ನೀಡಿದೆ.
ಕೆ.ಆರ್ ನಗರದಲ್ಲಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಕಳೆದ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನು ಶಿಕ್ಷೆ ಪ್ರಮಾಣ ಹಾಗೂ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರೂ ಸಹ ಯಾವುದೇ ರಿಲೀಫ್ ಸಿಕ್ಕಿಲ್ಲ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ (HD Devegowda) ಪತ್ನಿ ಚೆನ್ನಮ್ಮ (Chennamma) ವಿಧಿವಶ ಹಿನ್ನೆಲೆ ಜೈಲಿನಲ್ಲಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ , ಅಜ್ಜಿಯನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಅಜ್ಜಿ ಅಂತ್ಯಕ್ರಿಯೆಯನ್ನು ವಿಸಿ ಮೂಲಕ ವೀಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.