AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಕೇಸ್​ನಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ.

ಅತ್ಯಾಚಾರ ಕೇಸ್​ನಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು
ಶಾಸಕ ಮುನಿರತ್ನ
Ramesha M
| Edited By: |

Updated on:Oct 15, 2024 | 4:39 PM

Share

ಬೆಂಗಳೂರು, (ಅಕ್ಟೋಬರ್ 15): ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ. ಇಂದು (ಅಕ್ಟೋಬರ್ 15) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಜಾತಿ ನಿಂದನೆ ಕೇಸ್‌ನಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ಸಿಕ್ಕಿತ್ತು. ಅದರೆ, ಅವರು ಬಿಡುಗಡೆ ಆಗುತ್ತಿರುವ ಹೊತ್ತಿನಲ್ಲಿಯೇ ಪರಪ್ಪನ ಅಗ್ರಹಾರದ ಬಳಿ ಅತ್ಯಾಚಾರ ಕೇಸ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಐಪಿಸಿ ಸೆಕ್ಷನ್ 354A, 354C, 376, 506, 504, 120(b), 149, 384, 406, 308 ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಹೊರತುಪಡಿಸಿ, ಇತರ ಆರು ವ್ಯಕ್ತಿಗಳ ವಿರುದ್ಧ ಆರೋಪ ಮಾಡಲಾಗಿತ್ತು. ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಸೇರಿದಂತೆ ಪ್ರಕರಣ ದಾಖಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಸೆಪ್ಟೆಂಬರ್ 14 ರಂದು ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದ್ದರು. ಕೋಲಾರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿ ನಿಖಿಲ್ ಅವರ ಪ್ರಕಾರ, ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದಾಗ ಕೋಲಾರ ಪೊಲೀಸರ ಸಹಾಯದಿಂದ ಬೆಂಗಳೂರು ಪೊಲೀಸರು ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಬಳಿಕ ಮುನಿರತ್ನ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಅದ್ರ, ಅಲ್ಲಿಯೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಮುನಿರತ್ನ ಬಂಧನವಾಗಿತ್ತು

Published On - 3:58 pm, Tue, 15 October 24

Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧ
Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧ
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!