AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Bidar Specail Train: ಬೆಂಗಳೂರು ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ

ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್​​ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಮತ್ತು ಬೀದರ್ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಿದೆ. ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿರುವ ಹೊಸ ರೈಲುಗಳು ಯಾವಾಗೆಲ್ಲ ಸಂಚರಿಸಲಿವೆ? ವೇಳಾಪಟ್ಟಿ ಹೇಗೆ? ಎಲ್ಲೆಲ್ಲಿ ನಿಲುಗಡೆ ಹೊಂದಿರಲಿದೆ ಎಂಬ ವಿವರ ಇಲ್ಲಿದೆ.

Bengaluru Bidar Specail Train: ಬೆಂಗಳೂರು ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jun 14, 2025 | 9:46 AM

Share

ಬೆಂಗಳೂರು, ಜೂನ್ 14: ಎಸ್​ಎಂವಿಟಿ ಬೆಂಗಳೂರು ಮತ್ತು ಬೀದರ್ ನಡುವೆ ನೈಋತ್ಯ ರೈಲ್ವೆ (SWR) ವಿಶೇಷ ರೈಲುಗಳನ್ನು (Special Train) ಘೋಷಿಸಿದೆ. ರೈಲು ಸಂಖ್ಯೆ 06539 ಎಸ್​ಎಂವಿಟಿ ಬೆಂಗಳೂರು-ಬೀದರ್ ಎಕ್ಸ್​ಪ್ರೆಸ್ ವಿಶೇಷ ರೈಲು ಜೂನ್ 15 ರಿಂದ 29 ರವರೆಗೆ ಶುಕ್ರವಾರ ಮತ್ತು ಭಾನುವಾರಗಳಂದು ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿದೆ. ಹಾಗೆಯೇ ರೈಲು ಸಂಖ್ಯೆ 06540 ​​ಬೀದರ್-ಎಸ್​ಎಂವಿಟಿ ಬೆಂಗಳೂರು ಕೂಡ ಶನಿವಾರ ಮತ್ತು ಸೋಮವಾರ ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿದೆ.

ಎಸ್​ಎಂವಿಟಿ ಬೆಂಗಳೂರು-ಬೀದರ್ ಎಕ್ಸ್​ಪ್ರೆಸ್ ವಿಶೇಷ ರೈಲು ಬೆಂಗಳೂರಿನಿಂದ ರಾತ್ರಿ 9.15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 11.30 ಕ್ಕೆ ಬೀದರ್ ತಲುಪಲಿದೆ. ಬೀದರ್-ಎಸ್​ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್ ವಿಶೇಷ ರೈಲು ಬೀದರ್​ನಿಂದ ತಡರಾತ್ರಿ 1 ಗಂಟೆಗೆ ಹೊರಟು ಮರುದಿನ ಬೆಳಗಿನ ಜಾವ 4 ಗಂಟೆಗೆ ಎಸ್​ಎಂವಿಟಿ ಬೆಂಗಳೂರು ತಲುಪಲಿದೆ.

ಬೆಂಗಳೂರು ಬೀದರ್ ವಿಶೇಷ ಎಕ್ಸ್​​ಪ್ರೆಸ್ ರೈಲಿಗೆ ಎಲ್ಲೆಲ್ಲಿ ನಿಲುಗಡೆ?

ಬೆಂಗಳೂರು ಬೀದರ್ ವಿಶೇಷ ಎಕ್ಸ್​​ಪ್ರೆಸ್ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಮತ್ತು ಹುಮನಾಬಾದ್​​ನಲ್ಲಿ ನಿಲುಗಡೆಯಾಗಲಿದೆ.

ಇದನ್ನೂ ಓದಿ
Image
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
Image
ವಿಮಾನ ದುರಂತ ಘಟನೆ ಹೃದಯವಿದ್ರಾವಕ: ಅಹಮದಾಬಾದ್ ಭೇಟಿ ಬಳಿಕ ಪ್ರಧಾನಿ ಮೋದಿ
Image
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
Image
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ

ಇದನ್ನೂ ಓದಿ: South Western Railway: ಎಕ್ಸ್​ಪ್ರೆಸ್​​ ರೈಲುಗಳ ಸಮಯಲ್ಲಿ ಬದಲಾವಣೆ ಮಾಡಿದ ನೈಋತ್ಯ ರೈಲ್ವೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Sat, 14 June 25