AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ, ಕ್ಯಾಬ್ ಚಾಲಕರಿಗೆ ವಿಶೇಷ ಆರೋಗ್ಯ ತಪಾಸಣೆ: ಇದಕ್ಕಿದೆ ಬಲವಾದ ಕಾರಣ!

ಕರ್ನಾಟಕದ ಆಟೋ ಮತ್ತು ಕ್ಯಾಬ್ ಚಾಲಕರಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವುದು ಕಳವಳಕಾರಿ. ಜಯದೇವ ಹೃದ್ರೋಗ ಸಂಸ್ಥೆಯ ವರದಿಯ ಪ್ರಕಾರ, ಕಳೆದ ವರ್ಷದ ಹೃದಯಾಘಾತ ಪ್ರಕರಣಗಳಲ್ಲಿ ಶೇ 30 ರಷ್ಟು ಆಟೋ ಮತ್ತು ಟ್ಯಾಕ್ಸಿ ಚಾಲಕರದ್ದಾಗಿತ್ತು. ಈ ವಿಚಾರ ವಿಧಾನಸಭೆ ಕಲಾಪದಲ್ಲಿಯೂ ಚರ್ಚೆಯಾಗಿದ್ದು, ಚಾಲಕರಿಗೆ ಆರೋಗ್ಯ ತಪಾಸಣೆ ನಡೆಸುವ ಯೋಜನೆ ಆರಂಭಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುಳಿವು ನೀಡಿದ್ದಾರೆ.

ಆಟೋ, ಕ್ಯಾಬ್ ಚಾಲಕರಿಗೆ ವಿಶೇಷ ಆರೋಗ್ಯ ತಪಾಸಣೆ: ಇದಕ್ಕಿದೆ ಬಲವಾದ ಕಾರಣ!
ಸಾಂದರ್ಭಿಕ ಚಿತ್ರ
Ganapathi Sharma
|

Updated on: Aug 15, 2025 | 9:00 AM

Share

ಬೆಂಗಳೂರು, ಆಗಸ್ಟ್ 15: ಆಟೋ ರಿಕ್ಷಾ ಮತ್ತು ಕ್ಯಾಬ್ ಚಾಲಕರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು (Heart Problems) ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದ್ದು, ಇದು ಕಳವಳಕಾರಿಯಾಗಿದೆ. ಹೀಗಾಗಿ ಆಟೋ ರಿಕ್ಷಾ ಮತ್ತು ಕ್ಯಾಬ್ ಚಾಲಕರ ಆರೋಗ್ಯ ತಪಾಸಣೆಗೆ ಉಪಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದಲ್ಲಿ ವರದಿಯಾದ ಹೃದಯಾಘಾತ ಪ್ರಕರಣಗಳಲ್ಲಿ ಶೇ 30 ರಷ್ಟು ಆಟೋ ಮತ್ತು ಟ್ಯಾಕ್ಸಿ ಚಾಲಕರಿದ್ದಾರೆ ಎಂಬುದು ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ (Jayadeva Institute of Cardiovascular Sciences and Research) ದತ್ತಾಂಶಗಳಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

ಆಟೋ, ಕ್ಯಾಬ್ ಚಾಲಕರಲ್ಲೇ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು?

ವಾಯು ಮಾಲಿನ್ಯ, ನಿದ್ರೆಯ ಕೊರತೆ, ಹೆಚ್ಚಿನ ಒತ್ತಡ, ಕಳಪೆ ಆಹಾರ ಪದ್ಧತಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಸ್ಥಿತಿಗಳು ಸೇರಿದಂತೆ ಅನಾರೋಗ್ಯಕರ ಜೀವನಶೈಲಿ ಆಟೋ, ಕ್ಯಾಬ್ ಚಾಲಕರಲ್ಲೇ ಹೃದಯಾಘಾತ ಪ್ರಕರಣ ಹೆಚ್ಚಳಕ್ಕೆ ಕಾರಣ ಎಂದು ಸಚಿವರು ಹೇಳಿದ್ದಾರೆ. ಮಾಲಿನ್ಯ, ನಿದ್ರೆಯ ಕೊರತೆ, ಹೊರಗೆ ಊಟ ಮಾಡುವುದು, ಒತ್ತಡ ಸಮಸ್ಯೆಗೆ ಕಾರಣವಾಗುತ್ತಿದೆ. ಅಲ್ಲದೆ, ಅವರಿಗೆ ಬಿಪಿ ಮತ್ತು ಮಧುಮೇಹವೂ ಇರಬಹುದು. ಇಷ್ಟೇ ಅಲ್ಲದೆ, ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳದಿರುವುದು, ಇತರ ಕಾಯಿಲೆಗಳು ಇರುವುದು ಎಲ್ಲವೂ ಸೇರಿ ಸಮಸ್ಯೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯ ತಪಾಸಣೆಗೆ ಚಾಲಕರ ಸಂಘದೊಂದಿಗೆ ಮಾತುಕತೆ: ಗುಂಡೂರಾವ್

ಉದ್ದೇಶಿತ ಆರೋಗ್ಯ ತಪಾಸಣೆ ಯೋಜನೆಯನ್ನು ಜಾರಿಗೆ ತರಲು ಆಟೋ ಮತ್ತು ಕ್ಯಾಬ್ ಚಾಲಕರ ಸಂಘಗಳೊಂದಿಗೆ ಚರ್ಚೆ ನಡೆಯುತ್ತಿದೆ ಎಂದು ಗುಂಡೂರಾವ್ ಹೇಳಿದ್ದಾರೆ. ಮತ್ತೊಂದೆಡೆ, ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹೃದಯ ಆರೋಗ್ಯ ತಪಾಸಣೆ ಯೋಜನೆಯನ್ನು ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆಯೂ ಸರ್ಕಾರ ಮೌಲ್ಯಮಾಪನ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಕ್ಕಳ ಮೇಲಿನ ಮಾನಸಿಕ ಒತ್ತಡದ ಬಗ್ಗೆ ಮಾತನಾಡಿದ ಅವರು, ಆಪ್ತ ಸಮಾಲೋಚನೆ ಸಹ ವಿಶಾಲ ಯೋಜನೆಯ ಭಾಗವಾಗಿರುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ

ಶಾಲಾ ಮಕ್ಕಳಿಗೂ ಮಾನಸಿಕ ಒತ್ತಡವಿರುತ್ತದೆ, ಅವರಿಗೆ ಮಾನಸಿಕ ಸಮಾಲೋಚನೆ ನೀಡಲಾಗುವುದು. ಇದರ ಅಡಿಯಲ್ಲಿ ಯಾವುದೇ ಆರಂಭಿಕ ತಪಾಸಣೆಯನ್ನು (ಹೃದಯರಕ್ತನಾಳದ ಆರೋಗ್ಯಕ್ಕಾಗಿ) ಮಾಡಬಹುದೇ ಎಂದು ನಾವು ಚರ್ಚಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?