ವಾಕರಸಾ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್: ಸ್ಥಳ, ದರ ಬಗ್ಗೆ ಇಲ್ಲಿದೆ ಮಾಹಿತಿ

ಪ್ರತಿ ಭಾನುವಾರ ಹಾಗೂ ರಜಾ ದಿನಗಳಂದು ವಿಶೇಷ ಸಾರಿಗೆ ಸೌಲಭ್ಯದೊಂದಿಗೆ ಹುಬ್ಬಳ್ಳಿ, ಧಾರವಾಡ, ಹಾವೇರಿ, ಚಿಕ್ಕೋಡಿ, ಬೆಳಗಾವಿ, ಗದಗ ವಿಭಾಗಗಳಿಂದ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಲಾಗಿದೆ. ದರ ಮಾಹಿತಿ ಇಲ್ಲಿದೆ.

ವಾಕರಸಾ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್: ಸ್ಥಳ, ದರ ಬಗ್ಗೆ ಇಲ್ಲಿದೆ ಮಾಹಿತಿ
ವಾಕರಸಾ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್: ಸ್ಥಳ, ದರ ಬಗ್ಗೆ ಇಲ್ಲಿದೆ ಮಾಹಿತಿ
Follow us
|

Updated on: Jul 21, 2024 | 7:21 PM

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಮುಂಗಾರು ಮಳೆ (Rain) ಚುರುಕುಗೊಂಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಧಾರಾಕಾರ ಮಳೆಗೆ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಸದ್ಯ ಪ್ರವಾಸಿಗರ ಅನುಕೂಲ ದೃಷ್ಟಿಯಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (nwkrtc) ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ವಿಶೇಷ ಟೂರ್ ಪ್ಯಾಕೇಜ್​ನ್ನು ಘೋಷಣೆ ಮಾಡಿದೆ.

ಈ ಬಗ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರತಿ ಭಾನುವಾರ ಹಾಗೂ ರಜಾ ದಿನಗಳಂದು ವಿಶೇಷ ಸಾರಿಗೆ ಸೌಲಭ್ಯದೊಂದಿಗೆ ಹುಬ್ಬಳ್ಳಿ, ಧಾರವಾಡ, ಹಾವೇರಿ, ಚಿಕ್ಕೋಡಿ, ಬೆಳಗಾವಿ, ಗದಗ ವಿಭಾಗಗಳಿಂದ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಲಾಗಿದೆ. ಆನ್‌ಲೈನ್ ಟಿಕೆಟ್ ಬುಕಿಂಗ್​ಗಾಗಿ http://ksrtc.in ಗೆ ಭೇಟಿ ನೀಡಬಹುದಾಗಿದೆ.

ಸಾರಿಗೆ ಸಂಸ್ಥೆ ಟ್ವೀಟ್​ 

ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಹುಬ್ಬಳ್ಳಿ-ಜೋಗ ಫಾಲ್ಸ್​​ಗೆ 8ಗಂಟೆಗೆ ಐರಾವತ್ ಬಸ್​ ಹೊರಡಲಿದ್ದು, (ಹೋಗಿ ಬರುವುದಕ್ಕೆ) 600 ರೂ ಪ್ರಯಾಣ ದರ ನಿಗದಿಸಲಾಗಿದೆ. 7:30 ಗಂಟೆಗೆ ರಾಜಹಂಸ ಬಸ್​ ಹೊರಡಲಿದ್ದು (ಹೋಗಿ ಬರುವುದಕ್ಕೆ) 430 ರೂ. ದರ ನಿಗದಿಯಾಗಿದೆ. 8:10ಕ್ಕೆ ವಾಯವ್ಯ ಕರ್ನಾಟಕ ಸಾರಿಗೆ ಹೊರಡಲಿದ್ದು (ಹೋಗಿ ಬರುವುದಕ್ಕೆ) 350 ರೂ. ದರವಿದೆ.

ಇದನ್ನೂ ಓದಿ: ಅಂಕೋಲಾ ಶಿರೂರು ಹೆದ್ದಾರಿ ಬಂದ್​: ಮಡಗಾಂವ್ ಜಂಕ್ಷನ್-ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ವ್ಯವಸ್ಥೆ

ಧಾರವಾಡ ವಿಭಾಗದಿಂದ ಧಾರವಾಡ-ದಾಂಡೇಲಿಗೆ 7:30 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ನಿರ್ಗಮಿಸಲಿದ್ದು (ಹೋಗಿ ಬರುವುದಕ್ಕೆ) 340 ರೂ. ಹಾಗೂ ಧಾರವಾಡ-ಗೋಕಾಕ ಫಾಲ್ಸ್​​​ಗೆ 7:30 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ಹೊರಡಲಿದ್ದು 375 ರೂ. ದರ ನಿಗದಿಪಡಿಸಲಾಗಿದೆ.

ಹಾವೇರಿ ವಿಭಾಗದಿಂದ ಹಾವೇರಿ- ಜೋಗ ಫಾಲ್ಸ್​​ಗೆ 8 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ನಿರ್ಗಮಿಸಲಿದ್ದು (ಹೋಗಿ ಬರುವುದಕ್ಕೆ) 340 ರೂ. ಹಾಗೂ ರಾಣೇಬೆನ್ನೂರು-ಜೋಗ ಫಾಲ್ಸ್​​ಗೆ 8 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ಹೊರಡಲಿದ್ದು 320 ರೂ ದರ ನಿಗದಿಸಲಾಗಿದೆ.

ಚಿಕ್ಕೋಡಿ ವಿಭಾಗದಿಂದ ಚಿಕ್ಕೋಡಿ-ಗೋಗಾಕ ಫಾಲ್ಸ್​ಗೆ 9 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ನಿರ್ಗಮಿಸಲಿದ್ದು (ಹೋಗಿ ಬರುವುದಕ್ಕೆ) 220 ರೂ ಹಾಗೂ ಸಂಕೇಶ್ವರ-ಗೋಗಾಕ ಫಾಲ್ಸ್​ಗೆ 9:30ಕ್ಕೆ ವಾಯವ್ಯ ಕರ್ನಾಟಕ ಸಾರಿಗೆ ಹೊರಡಲಿದ್ದು, 160 ರೂ ಮತ್ತು ನಿಪ್ಪಾಣಿ- ಗೋಗಾಕ ಫಾಲ್ಸ್​ಗೆ ವಾಯವ್ಯ ಕರ್ನಾಟಕ ಸಾರಿಗೆ ಬಸ್​ ಹೊರಡಲಿದ್ದು, 220 ರೂ ಪ್ರಯಾಣ ದರವಿರಲಿದೆ.

ಇದನ್ನೂ ಓದಿ: ಮಂಗಳೂರು ಬೆಂಗಳೂರು ಮಧ್ಯೆ 2 ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಬೆಳಗಾವಿ ವಿಭಾಗದಿಂದ ಬೆಳಗಾವಿ-ಗೋಗಾಕ ಫಾಲ್ಸ್​ಗೆ 9 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ನಿರ್ಗಮಿಸಲಿದ್ದು (ಹೋಗಿ ಬರುವುದಕ್ಕೆ) 190 ರೂ ದರ ನಿಗದಿಸಲಾಗಿದೆ.

ಗದಗ ವಿಭಾಗದಿಂದ ಗದಗ-ಜೋಗ ಫಾಲ್ಸ್​ಗೆ 7 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ನಿರ್ಗಮಿಸಲಿದ್ದು (ಹೋಗಿ ಬರುವುದಕ್ಕೆ) 500 ರೂ ಹಾಗೂ ಗದಗ-ಗೋಕಾಕ ಫಾಲ್ಸ್​ಗೆ 8 ಗಂಟೆಗೆ ವಾಯವ್ಯ ಕರ್ನಾಟಕ ಸಾರಿಗೆ ಹೊರಡಲಿದ್ದು 340 ರೂ. ನಿಗದಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!