AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕ್, ಶ್ರವಣ ದೋಷವುಳ್ಳ ವಕೀಲೆಯ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್: ದೇಶದಲ್ಲೇ ಮೊದಲು!

2023 ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್​ನಲ್ಲಿ ಸಂಜ್ಞಾ ಭಾಷೆಯ ಮೂಲಕ ವಾದ ಮಂಡಿಸಿ ದೇಶದ ನ್ಯಾಯಾಂಗದ ಇತಿಹಾಸದಲ್ಲಿ ದಾಖಲೆ ನಿರ್ಮಾಣ ಮಾಡಿದ್ದ ವಾಕ್ ಮತ್ತು ಶ್ರವಣ ದೋಷವುಳ್ಳ ವಕೀಲೆ ಸಾರಾ ಸನ್ನಿ ಇದೀಗ ಮತ್ತೊಂದು ದಾಖಲೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್​ನಲ್ಲಿ ಸಂಜ್ಞಾ ಭಾಷೆಯ ಇಂಟರ್ಪ್ರಿಟರ್ ಮೂಲಕ ವಾದ ಮಂಡನೆ ಮಾಡಿದ್ದಾರೆ. ಇದರೊಂದಿಗೆ, ಸಂಜ್ಞಾ ಭಾಷೆಯಲ್ಲಿ ಮಂಡಿಸಿದ ವಾದ ಆಲಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕರ್ನಾಟಕ ಹೈಕೋರ್ಟ್ ಪಾತ್ರವಾಗಿದೆ.

ವಾಕ್, ಶ್ರವಣ ದೋಷವುಳ್ಳ ವಕೀಲೆಯ ವಾದ ಆಲಿಸಿದ ಕರ್ನಾಟಕ ಹೈಕೋರ್ಟ್: ದೇಶದಲ್ಲೇ ಮೊದಲು!
ಕರ್ನಾಟಕ ಹೈಕೋರ್ಟ್ (ಒಳ ಚಿತ್ರದಲ್ಲಿ ಸಾರಾ ಸನ್ನಿ)
ಗಣಪತಿ ಶರ್ಮಾ
|

Updated on: Apr 09, 2024 | 8:08 AM

Share

ಬೆಂಗಳೂರು, ಏಪ್ರಿಲ್ 9: ವಾಕ್ ಮತ್ತು ಶ್ರವಣ ದೋಷವುಳ್ಳ ವಕೀಲರು ಸಂಜ್ಞಾ ಭಾಷೆಯ ಮೂಲಕ ಮಂಡಿಸಿದ ವಾದವನ್ನು ಕರ್ನಾಟಕ ಹೈಕೋರ್ಟ್ (Karnataka High Court) ಸೋಮವಾರ ಆಲಿಸಿದೆ. ಈ ಮೂಲಕ, ಸಂಜ್ಞಾ ಭಾಷೆಯಲ್ಲಿ (Sign language) ಮಂಡಿಸಿದ ವಾದ ಆಲಿಸಿದ ದೇಶದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಕೀಲೆ ಸಾರಾ ಸನ್ನಿ ಮಂಡಿಸಿದ ವಾದವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಪೀಠವು ಆಲಿಸಿತು.

ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸಿದ್ದ ಸಾರಾ

ಪ್ರಮಾಣೀಕೃತ ಸಂಜ್ಞಾ ಭಾಷಾ ಇಂಟರ್ಪ್ರಿಟರ್ (ವಿವರಣೆಕಾರ) ಮೂಲಕ 2023 ರ ಅಕ್ಟೋಬರ್‌ನಲ್ಲಿ ವಕೀಲೆ ಸಾರಾ ಸನ್ನಿ ಸುಪ್ರೀಂ ಕೋರ್ಟ್​ನಲ್ಲಿ ವಾದ ಮಂಡಿಸಿ ದೇಶದ ನ್ಯಾಯಾಂಗದ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದರು. ಇದೀಗ ಹೈಕೋರ್ಟ್​ನಲ್ಲಿ ವಾದ ಮಂಡನೆ ಮಾಡಿ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದಾರೆ.

‘ಅರ್ಜಿದಾರರ ಪತ್ನಿಯ ಪರ ವಕೀಲೆ ಸಾರಾ ಸನ್ನಿ ಸಂಜ್ಞಾ ಭಾಷೆಯ ಇಂಟರ್ಪ್ರಿಟರ್ ಮೂಲಕ ವಿವರವಾಗಿ ವಾದ ಮಂಡನೆ ಮಾಡಿದ್ದಾರೆ. ಸಾರಾ ಸನ್ನಿ ಮಾಡಿದ ವಾದ ಮಂಡನೆಯನ್ನು ಪ್ರಶಂಸಿಸಬೇಕಾಗಿದೆ. ಸಂಜ್ಞೆ ಭಾಷಾ ಇಂಟರ್ಪ್ರಿಟರ್ ಮೂಲಕವಾದರೂ ಮೆಚ್ಚುಗೆಯಾಗುವ ರೀತಿಯಲ್ಲಿ ವಾದ ಮಂಡನೆ ಮಾಡಿದ್ದಾರೆ’ ಎಂದು ನ್ಯಾಯಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ವಾಕ್ ಮತ್ತು ಶ್ರವಣದೋಷವುಳ್ಳ ವಕೀಲರ ಅಹವಾಲುಗಳನ್ನು ದಾಖಲಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕರ್ನಾಟಕ ಹೈಕೋರ್ಟ್ ಪಾತ್ರವಾಗಿದೆ ಎಂದರು.

ಇದನ್ನೂ ಓದಿ: ದಿವ್ಯಾಂಗರು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾರಾ ಸಾಕ್ಷಿ, ಇಲ್ಲಿದೆ ಕೇರಳದ ದಿವ್ಯಾಂಗ ವಕೀಲೆಯ ಯಶೋಗಾಥೆ

ಮಹಿಳೆಯೊಬ್ಬರು ಪತಿಯ ವಿರುದ್ಧ ಐಪಿಸಿ ಸೆಕ್ಷನ್ 498 (ಎ), 504, 506 ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3, 4 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಮಹಿಳೆಯ ಪರ ವಕೀಲೆ ಸಾರಾ ವಾದ ಮಂಡಿಸಿದ್ದರು. ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ಲುಕ್‌ಔಟ್ ನೋಟಿಸ್​ಗೆ ತಡೆ ನೀಡುವಂತೆ ಕೋರಿ ಸಾರಾ ಕಕ್ಷಿಗಾರರ ಪತಿ ನ್ಯಾಯಾಲಯದ ಮೊರೆ ಹೋಗಿದ್ದರು.

ಯಾರು ಈ ಸಾರಾ ಸನ್ನಿ?

ಸಾರಾ ಸನ್ನಿ ಮೂಲತಃ ಕೇರಳದ ಕೊಟ್ಟಾಯಂನವರು. ಸಾರಾ ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ವಿದ್ಯಾಲಯದಲ್ಲಿ ಎಲ್​ಎಲ್​ಬಿ ಪದವಿ ಪಡೆದಿದ್ದಾರೆ. ಸಾರಾಗೆ ಬಾಲ್ಯದಿಂದಲೂ ಕಿವಿ ಕೇಳಿಸುತ್ತಿರಲಿಲ್ಲ, ಮಾತು ಸಹ ಬರುತ್ತಿರಲಿಲ್ಲ. ಆದರೆ ತಂದೆ ತಾಯಿ ಬೆಂಬಲದೊಂದಿಗೆ ಎಲ್​ಎಲ್​ಬಿ ಕಲಿತು ವಕೀಲಿ ವೃತ್ತಿ ಆರಿಸಿಕೊಂಡಿದ್ದಾರೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ವಿದ್ಯಾಲಯದಲ್ಲಿ ಎಲ್​ಎಲ್​ಬಿ ಪದವಿ ಪಡೆದಿದ್ದಾರೆ. ಹಿರಿಯ ವಕೀಲರಾದ ಸಂಚಿತಾ ಬಳಿ ಸಾರಾ ಸುಪ್ರೀಂಕೋರ್ಟ್​ನಲ್ಲಿ ಅಭ್ಯಾಸ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ