AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಮನೆಯ ಖರ್ಚು ಮತ್ತಷ್ಟು ಹೆಚ್ಚಳ! ಮೆಣಸಿನಕಾಯಿ, ಜೀರಿಗೆ, ಏಲಕ್ಕಿ ಸೇರಿ ಮಸಾಲೆ ಪದಾರ್ಥಗಳ ದರದಲ್ಲಿ ಭಾರೀ ಏರಿಕೆ

Spice Prices Surge in Karnataka: ಅಕ್ಕಿ ಮತ್ತು ತುಪ್ಪದ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಮೆಣಸಿನಕಾಯಿ, ಜೀರಿಗೆ, ಧನಿಯಾ, ಏಲಕ್ಕಿ, ಲವಂಗ ಸೇರಿದಂತೆ ಹಲವು ಮಸಾಲೆ ಪದಾರ್ಥಗಳ ದರ ಭಾರೀ ಏರಿಕೆಯಾಗಿದೆ. ಇದರಿಂದ ಅಡುಗೆ ಮನೆಯ ಮಾಸಿಕ ಬಜೆಟ್ ಮತ್ತಷ್ಟು ದುಬಾರಿಯಾಗಲಿದೆ.

ಅಡುಗೆ ಮನೆಯ ಖರ್ಚು ಮತ್ತಷ್ಟು ಹೆಚ್ಚಳ! ಮೆಣಸಿನಕಾಯಿ, ಜೀರಿಗೆ, ಏಲಕ್ಕಿ ಸೇರಿ ಮಸಾಲೆ ಪದಾರ್ಥಗಳ ದರದಲ್ಲಿ ಭಾರೀ ಏರಿಕೆ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Jul 27, 2026 | 2:22 PM

Share

ಮುಖ್ಯಾಂಶಗಳು

  • ಅಕ್ಕಿ, ತುಪ್ಪ ಬಳಿಕ ಈಗ ಮಸಾಲೆ ಪದಾರ್ಥಗಳ ಬೆಲೆ ಏರಿಕೆ
  • ಮೆಣಸಿನಕಾಯಿ, ಜೀರಿಗೆ, ಧನಿಯಾ, ಏಲಕ್ಕಿ ಸೇರಿ ಹಲವು ಮಸಾಲೆಗಳ ದರ ಗಗನಕ್ಕೇರಿಕೆ
  • ಮಧ್ಯಮ ವರ್ಗ, ಹೋಟೆಲ್ ಹಾಗೂ ಬೇಕರಿ ಉದ್ಯಮದ ಮೇಲೆ ಬೆಲೆ ಏರಿಕೆಯ ಬಿಸಿ

ಬೆಂಗಳೂರು, ಜುಲೈ 27: ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಅವಿಭಾಜ್ಯವಾಗಿರುವ ಮಸಾಲೆ ಪದಾರ್ಥಗಳ ದರವೂ (Spice Prices) ಏರಿಕೆಯಾಗಿದೆ. ಇದರಿಂದ ಮನೆಯ ಮಾಸಿಕ ಬಜೆಟ್ ಮತ್ತಷ್ಟು ದುಬಾರಿಯಾಗಿದ್ದು, ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ.

ಮೆಣಸಿನಕಾಯಿ, ಜೀರಿಗೆ, ಧನಿಯಾ, ಮೆಂತೆ, ಸಾಸಿವೆ, ಚಕ್ಕೆ, ಲವಂಗ, ಏಲಕ್ಕಿ ಸೇರಿದಂತೆ ಬಹುತೇಕ ಪ್ರಮುಖ ಮಸಾಲೆ ಪದಾರ್ಥಗಳ ದರ ಕಳೆದ ಕೆಲವು ವಾರಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅಡುಗೆಯ ರುಚಿ ಮತ್ತು ಸುವಾಸನೆ ಹೆಚ್ಚಿಸುವ ಈ ವಸ್ತುಗಳ ಬೆಲೆ ಹೆಚ್ಚಳದಿಂದ ಮನೆ ಬಳಕೆದಾರರ ಜೊತೆಗೆ ಹೋಟೆಲ್, ಬೇಕರಿ ಹಾಗೂ ಆಹಾರ ಉತ್ಪಾದನಾ ಕ್ಷೇತ್ರವೂ ಸಂಕಷ್ಟ ಎದುರಿಸುತ್ತಿದೆ.

ಮಸಾಲೆ ಪದಾರ್ಥ ದರ ಏರಿಕೆಗೆ ಕಾರಣವೇನು?

ವ್ಯಾಪಾರಿಗಳ ಪ್ರಕಾರ, ಸಾಗಾಣಿಕೆ ವೆಚ್ಚ ಏರಿಕೆ, ಕೆಲವು ಮಸಾಲೆ ಬೆಳೆಗಳ ಉತ್ಪಾದನೆ ಕುಸಿತ ಹಾಗೂ ಮಾರುಕಟ್ಟೆಯಲ್ಲಿ ಲಭ್ಯತೆ ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಪರಿಣಾಮವಾಗಿ ಚಿಲ್ಲರೆ ಮಾರುಕಟ್ಟೆಯಲ್ಲೂ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಸಾಲೆ ಪದಾರ್ಥಗಳನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಸಾಲೆ ಪದಾರ್ಥಗಳ ಹಳೆಯ ಹಾಗೂ ಹೊಸ ಸಗಟು ದರ (ಪ್ರತಿ ಕೆ.ಜಿ.ಗೆ ರೂ.ಗಳಲ್ಲಿ)

ಮಸಾಲೆ ಪದಾರ್ಥ ಹಳೆಯ ದರ ಹೊಸ ದರ
ಏಲಕ್ಕಿ 3800 4300
ಬಾದಾಮಿ 800 1000
ಸಾಸಿವೆ 80 100
ಮೆಂತೆ ಕಾಳು 80 100
ಧನಿಯಾ 160 220
ಹುಣಸೆಹಣ್ಣು 140 170
ಒಣ ಮೆಣಸಿನಕಾಯಿ 230 320
ಜೀರಿಗೆ 160 260
ಲವಂಗ 600 900
ಚಕ್ಕೆ 170 240

ಹೋಟೆಲ್, ಬೇಕರಿ ಉದ್ಯಮದ ಮೇಲೂ ಪರಿಣಾಮ

ಹೋಟೆಲ್ ಹಾಗೂ ಬೇಕರಿ ಉದ್ಯಮದಲ್ಲೂ ಉತ್ಪಾದನಾ ವೆಚ್ಚ ಹೆಚ್ಚಳ ಕಂಡುಬಂದಿದ್ದು, ಹಲವು ಆಹಾರ ಪದಾರ್ಥಗಳ ತಯಾರಿಕೆ ವೆಚ್ಚದ ಮೇಲೂ ಪರಿಣಾಮ ಬೀರಿದೆ. ಬೆಲೆ ಏರಿಕೆಯ ಒತ್ತಡ ಮುಂದುವರಿದರೆ ಮುಂದಿನ ದಿನಗಳಲ್ಲಿ ತಿನಿಸುಗಳ ದರವೂ ಹೆಚ್ಚುವ ಸಾಧ್ಯತೆ ಇದೆ ಎಂಬ ಆತಂಕ ವ್ಯಾಪಾರಿಗಳಲ್ಲಿದೆ.

ಇದನ್ನೂ ಓದಿ: ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಬಿಸಿ: ದಾಖಲೆ ಬರೆದ ದರ

ಒಟ್ಟಾರೆ, ಅಗತ್ಯ ದಿನಸಿ ವಸ್ತುಗಳ ಬೆಲೆ ಏರಿಕೆಯ ಸರಣಿಗೆ ಈಗ ಮಸಾಲೆ ಪದಾರ್ಥಗಳೂ ಸೇರ್ಪಡೆಯಾಗಿವೆ. ಅಡುಗೆ ಮನೆಯ ಸುವಾಸನೆಗೆ ಈಗ ಗ್ರಾಹಕರು ಹೆಚ್ಚುವರಿ ಬೆಲೆ ತೆರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ವೆಚ್ಚದ ಮೇಲೆ ಇದರ ನೇರ ಪರಿಣಾಮ ಬೀಳುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್
ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ