AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳ ವೀರನ ‘ಮಿಂಚಿನ ಓಟ’.. SAI ಸಂಪರ್ಕಕ್ಕೆ ಸೂಚಿಸಿದ ಕೇಂದ್ರ ಕ್ರೀಡಾ ಸಚಿವ

ದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಜನಪ್ರಿಯವಾಗಿರುವ ಕಂಬಳ ಕ್ರೀಡೆಯಲ್ಲಿ ಮಿಂಚಿನ ವೇಗದಲ್ಲಿ ಕೋಣ ಓಡಿಸುವ ಮೂಲಕ ದಕ್ಷಿಣ ಕನ್ನಡದ ಶ್ರೀನಿವಾಸಗೌಡ‌‌ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ. ಈ ಮೂಲಕ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್​ ದಾಖಲೆಗಳನ್ನು ಮುರಿದಿದ್ದಾರೆ. ಇದನ್ನೂ ಓದಿ: ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ! ಇದೀಗ ಕಂಬಳ ಓಟಗಾರ ಶ್ರೀನಿವಾಸಗೌಡ‌ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗಮನ ಸೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿರಣ್ […]

ಕಂಬಳ ವೀರನ ‘ಮಿಂಚಿನ ಓಟ’.. SAI ಸಂಪರ್ಕಕ್ಕೆ ಸೂಚಿಸಿದ ಕೇಂದ್ರ ಕ್ರೀಡಾ ಸಚಿವ
ಸಾಧು ಶ್ರೀನಾಥ್​
|

Updated on:Feb 18, 2020 | 11:12 AM

Share

ದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಜನಪ್ರಿಯವಾಗಿರುವ ಕಂಬಳ ಕ್ರೀಡೆಯಲ್ಲಿ ಮಿಂಚಿನ ವೇಗದಲ್ಲಿ ಕೋಣ ಓಡಿಸುವ ಮೂಲಕ ದಕ್ಷಿಣ ಕನ್ನಡದ ಶ್ರೀನಿವಾಸಗೌಡ‌‌ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ. ಈ ಮೂಲಕ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್​ ದಾಖಲೆಗಳನ್ನು ಮುರಿದಿದ್ದಾರೆ.

ಇದನ್ನೂ ಓದಿ: ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

ಇದೀಗ ಕಂಬಳ ಓಟಗಾರ ಶ್ರೀನಿವಾಸಗೌಡ‌ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗಮನ ಸೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿರಣ್ ರಿಜಿಜು, ಶ್ರೀನಿವಾಸಗೌಡಗೆ ಕ್ರೀಡಾ ಪ್ರಾಧಿಕಾರದ ಕೋಚ್​ಗಳಿಂದ ಕೋಚಿಂಗ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಒಲಿಂಪಿಕ್ ಕ್ರೀಡೆಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ದೇಶದಲ್ಲಿ ಪ್ರತಿಭಾವಂತರು ಅವಕಾಶ ಸಿಗದೇ ವಂಚಿತರಾಗಬಾರದು. ಹೀಗಾಗಿ ಶ್ರೀನಿವಾಸಗೌಡ ಸಾಮರ್ಥ್ಯ ಪರೀಕ್ಷೆಗೆ ಕೇಂದ್ರ ಕ್ರೀಡಾ ಇಲಾಖೆ ಮುಂದಾಗಿದೆ.

ಶ್ರೀನಿವಾಸ ಗೌಡರನ್ನು ಸಂಪರ್ಕಿಸಿದ SAI ಅಧಿಕಾರಿಗಳು: ಉನ್ನತ ರಾಷ್ಟ್ರೀಯ ತರಬೇತುದಾರರು ಶ್ರೀನಿವಾಸ ಗೌಡರ ಸಾಮರ್ಥ್ಯ ಪರೀಕ್ಷೆ ನಡೆಸಲಿದ್ದಾರೆ. ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, ಭರವಸೆ ನೀಡುತ್ತಿದ್ದಂತೆ ಶ್ರೀನಿವಾಸ ಗೌಡ ಅವರಿಗೆ ರೈಲ್ವೇ ಟಿಕೆಟ್ ಕೂಡಾ ಬುಕ್ ಮಾಡಲಾಗಿದೆ, ಸೋಮವಾರ ಅವರು ಸಾಯಿ ಕೇಂದ್ರವನ್ನು ತಲುಪಲಿದ್ದಾರೆ ಎಂದು ಮೂಲಗಳು ಹೇಳಿವೆ.

ಟ್ವೀಟ್ ಮೂಲಕ ಶ್ರೀನಿವಾಸ ಗೌಡ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವರ ಗಮನಕ್ಕೆ ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ತಂದಿದ್ದರು.

Published On - 1:25 pm, Sat, 15 February 20

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?